Breaking News
Home / ರಾಜ್ಯ / ಎಸ್ಎಸ್ಎಲ್ ಸಿ ಪರೀಕ್ಷೆ ಪೂರ್ವಭಾವಿ ಸಭೆ ಮುಗಿಸಿ ಬೈಕ್ ನಲ್ಲಿ ತೆರಳುತ್ತಿದ್ದ ಶಿಕ್ಷಕರಿಬ್ಬರು ಭೀಕರ ಅಪಘಾತಕ್ಕೆ ಬಲಿ

ಎಸ್ಎಸ್ಎಲ್ ಸಿ ಪರೀಕ್ಷೆ ಪೂರ್ವಭಾವಿ ಸಭೆ ಮುಗಿಸಿ ಬೈಕ್ ನಲ್ಲಿ ತೆರಳುತ್ತಿದ್ದ ಶಿಕ್ಷಕರಿಬ್ಬರು ಭೀಕರ ಅಪಘಾತಕ್ಕೆ ಬಲಿ

Spread the love

ವಿಜಯಪುರ – ಎಸ್ಎಸ್ಎಲ್ ಸಿ ಪರೀಕ್ಷೆ ಪೂರ್ವಭಾವಿ ಸಭೆ ಮುಗಿಸಿ ಬೈಕ್ ನಲ್ಲಿ ತೆರಳುತ್ತಿದ್ದ ಶಿಕ್ಷಕರಿಬ್ಬರು ಭೀಕರ ಅಪಘಾತಕ್ಕೆ ಬಲಿಯಾಗಿದ್ದಾರೆ.

ವಿಜಯಪುರದ ಹೊರವಲಯದ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಲಾರಿ ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ದೇಹಗಳು ಛಿದ್ರವಾಗಿ ಬಿದ್ದಿದ್ದವು.

ವಿಜಯಪುರ ಜಿಲ್ಲೆಯ ಬರಟಗಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಕೆ.ಎಚ್.ಹುದ್ದಾರ (58) ಮತ್ತು ಸಹಶಿಕ್ಷಕ ಸಂಗನಗೌಡ ಪಾಟೀಲ ಮೃತರಾದವರು.

ವಿಜಯಪುರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಲಾರಿ ಚಾಲಕ ಪರಾರಿಯಾಗಿದ್ದಾನೆ.


Spread the love

About Laxminews 24x7

Check Also

ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Spread the love ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ