Breaking News
Home / ರಾಜಕೀಯ / ರಾತ್ರಿ ಓಡಾಡುವವರು ವೇಶ್ಯೆಯರು, ರೇಪ್​ಗೆ​ ಅರ್ಹರು ಎಂದು ಭೀಕರ ಕೊಲೆ ಸಮರ್ಥಿಸಿಕೊಂಡ ಪಾದ್ರಿ!

ರಾತ್ರಿ ಓಡಾಡುವವರು ವೇಶ್ಯೆಯರು, ರೇಪ್​ಗೆ​ ಅರ್ಹರು ಎಂದು ಭೀಕರ ಕೊಲೆ ಸಮರ್ಥಿಸಿಕೊಂಡ ಪಾದ್ರಿ!

Spread the love

ತಿರುವನಂತಪುರ: ಕೇರಳದ ವಿವಾದಾತ್ಮಕ ಇಸ್ಲಾಮಿಕ್ ಪಾದ್ರಿಯೊಬ್ಬರು ಇದೀಗ ಮಹಿಳೆಯರ ಕುರಿತಾಗಿ ಇನ್ನೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾತ್ರಿ 9 ಗಂಟೆಯ ನಂತರ ರಾತ್ರಿ ಹೊರಗೆ ಹೋಗುವ ಮಹಿಳೆಯರು ವೇಶ್ಯೆಯರು, ಅವರು ಅತ್ಯಾಚಾರ ಎಸಗಲು ಮಾತ್ರವಲ್ಲದೇ ಕೊಲೆ ಮಾಡಲು ಕೂಡ ಅರ್ಹರು ಎಂದಿದ್ದಾರೆ ಈ ಪಾದ್ರಿ.

ಕೇರಳದ ಪ್ರಸಿದ್ಧ ಧರ್ಮಗುರು ಎಂದೇ ಹೆಸರಾಗಿರುವ ಮೌಲಾನಾ ಸ್ವಾಲಿಹ್ ಬಾಥೆರಿ ಇಂಥದ್ದೊಂದು ಹೇಳಿಕೆ ನೀಡಿದ್ದಾರೆ. ಹಚಿನ್ಸನ್-ಗಿಲ್ಫೋರ್ಡ್ ಪ್ರೊಜೆರಿಯಾ ಸಿಂಡ್ರೋಮ್ (ಎಚ್‌ಜಿಪಿಎಸ್) ಎಂಬ ಸಮಸ್ಯೆಯಿಂದ ಬಳಲುತ್ತಿರುವ ಈ ಪಾದ್ರಿಗೆ 27 ವರ್ಷ ವಯಸ್ಸು. ಆದರೆ ಈ ರೋಗದಿಂದಾಗಿ ಬಾಲಕನ ಥರ ಇವರು ಕಾಣುತ್ತಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡುವಲ್ಲಿ ಇವರು ಪ್ರಸಿದ್ಧರು!

ಅತ್ಯಾಚಾರದ ಕುರಿತಂತೆ ಈ ಪಾದ್ರಿ ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆಗಿದೆ.

2011 ರಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಗೋವಿಂದಚಾಮಿ ಮಾಡಿದ್ದನ್ನು ಈ ಧರ್ಮಗುರು ಸಮರ್ಥಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಅಪರಾಧಿಯ ವಿರುದ್ಧ ನ್ಯಾಯಾಲಯ ನೀಡಿದ್ದ ತೀರ್ಪನ್ನು ಟೀಕಿಸಿರುವ ಮೌಲಾನಾ, ಯುವತಿ ರಾತ್ರಿ ವೇಳೆ ಪ್ರಯಾಣಿಸುತ್ತಿದ್ದ ಕಾರಣ ಗೋವಿಂದಚಾಮಿ ಅತ್ಯಾಚಾರ ಮಾಡಿದ್ದಾನೆ. ಇದು ಸರಿಯಾಗಿದೆ. ರಾತ್ರಿ ತಿರುಗಾಡುವ ಪ್ರತಿ ಹುಡುಗಿಯೂ ವೇಶ್ಯೆಯೇ ಎಂದಿದ್ದಾರೆ!
ಎರ್ನಾಕುಲಂನ ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮನೆಗೆ ರೈಲಿನಲ್ಲಿ ಹೋಗುತ್ತಿದ್ದ ಯುವತಿ ಮೇಲೆ ಈತ ದಾಳಿ ನಡೆಸಿದ್ದ. ಭಯದಲ್ಲಿ ಯುವತಿ ರೈಲಿನಿಂದ ಕೆಳಕ್ಕೆ ಜಿಗಿದಿದ್ದಳು. ನಂತರ ಈತನೂ ಜಿಗಿದು ಕಲ್ಲಿನಿಂದ ಹೊಡೆದು ಅತ್ಯಾಚಾರ ಮಾಡಿದ್ದ. ಐದು ದಿನಗಳ ನಂತರ ಯುವತಿ ಮೃತಪಟ್ಟಿದ್ದಳು.

2016 ರಲ್ಲಿ ಗೋವಿಂದಚಾಮಿಗೆ ಮರಣದಂಡನೆಯಾಗಿತ್ತು. ಆದರೆ ಸೂಕ್ತ ಸಾಕ್ಷಾಧಾರಗಳ ಕೊರತೆಯಿಂದ ಕೋರ್ಟ್​ ಈ ಶಿಕ್ಷೆಯನ್ನು 7 ವರ್ಷಗಳ ಜೈಲು ಶಿಕ್ಷೆಗೆ ಇಳಿಸಿತ್ತು.


Spread the love

About Laxminews 24x7

Check Also

ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಝ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ