ಇದೇ 26ರಿಂದ ಪದವಿ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಭಾನುವಾರ ಬೆಳಿಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವರು ಮತ್ತು ಅಧಿಕಾರಿಗಳ ಉನ್ನತಮಟ್ಟದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ರಾತ್ರಿ ಕರ್ಫ್ಯೂ ಅವಧಿಯನ್ನು ಪರಿಷ್ಕರಿಸಿದ್ದು, ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ಮಾತ್ರ ಕರ್ಫ್ಯೂ ಇರಲಿದೆ. ಚಿತ್ರಮಂದಿರಗಳು ಮತ್ತು ರಂಗಮಂದಿರಗಳಲ್ಲಿ ಶೇಕಡ 50ರಷ್ಟು ಆಸನಗಳ ಭರ್ತಿಯೊಂದಿಗೆ ಪ್ರದರ್ಶನ ಆರಂಭಿಸಲು ಅನುಮತಿ ನೀಡಲಾಗಿದೆ.
ಇನ್ನು ಕೆಲವೊಂದು ಮಾರ್ಗಸೂಚಿಗಳೊಂದಿಗೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕನಿಷ್ಠ ಡ ಒಂದು ಡೋಸ್ ಕೋವಿಡ್ ಲಸಿಕೆ ಪಡೆದವರು ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.