Breaking News
Home / ರಾಜಕೀಯ / ಅಧಿಕಾರ ಹೋದರೆ ಒಂದು ಗೂಟ ಹೋಯ್ತು ಅಂದುಕೊಳ್ತೀನಿ. ನಾನು ಯಾವತ್ತೂ ಗೂಟಕ್ಕೆ ಅಂಟಿಕೊಂಡು ಕುಳಿತಿಲ್ಲ: ಈಶ್ವರಪ್ಪ,

ಅಧಿಕಾರ ಹೋದರೆ ಒಂದು ಗೂಟ ಹೋಯ್ತು ಅಂದುಕೊಳ್ತೀನಿ. ನಾನು ಯಾವತ್ತೂ ಗೂಟಕ್ಕೆ ಅಂಟಿಕೊಂಡು ಕುಳಿತಿಲ್ಲ: ಈಶ್ವರಪ್ಪ,

Spread the love

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಡಿಯೋ ವೈರಲ್ ವಿಚಾರವಾಗಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ನಳೀನ್ ಕುಮಾರ್ ವಿರುದ್ಧ ವ್ಯವಸ್ಥಿತ ಸಂಚು ನಡೆದಿದೆ, ಅವರನ್ನು ಬಲಿಪಶು ಮಾಡಲು ಹೊರಟಂತಿದೆ ಎಂದು ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಸಚಿವರು, ಒಂದುವೇಳೆ ನನ್ನ ವಿರುದ್ಧ ಸಂಚು ನಡೆದರೂ ನಾನು ತಲೆ ಕೆಡಿಸಿಕೊಳ್ಳಲ್ಲ, ಅಧಿಕಾರ ಹೋದರೆ ಒಂದು ಗೂಟ ಹೋಯ್ತು ಅಂದುಕೊಳ್ತೀನಿ. ನಾನು ಯಾವತ್ತೂ ಗೂಟಕ್ಕೆ ಅಂಟಿಕೊಂಡು ಕುಳಿತಿಲ್ಲ ಎಂದು ಅಸಮಾಧಾನ ಹೊಸಹಾಕಿದರು. ಇದೇ ವೇಳೆ ನನಗೆ ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ಕೆಲಸ ಮಾಡ್ತೀನಿ. ಯುವಕರಿಗೆ ಆದ್ಯತೆ ನಿಡಿದರೆ ತಪ್ಪೇನು? ಎಂದಿದ್ದಾರೆ.

ನಮ್ಮ ರಾಜ್ಯಾಧ್ಯಕ್ಷರ ಮೇಲೆ ನನಗೆ ನಂಬಿಕೆ ಇದೆ. ಆಡಿಯೋ ತನಿಖೆಯಾಗಲಿ ಎಂದು ಸ್ವತ: ಕಟೀಲ್ ಅವರೇ ಹೇಳಿದ್ದಾರೆ. ಹಾಗಾಗಿ ಆಡಿಯೋ ಮೊದಲು ತನಿಖೆಯಾಗಲಿ ಎಂದರು.

Spread the love

About Laxminews 24x7

Check Also

ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ.: ಲಕ್ಷ್ಮೀ ಹೆಬ್ಬಾಳ್ಕರ್

Spread the love ಬೆಳಗಾವಿ: ರಾಜ್ಯದ ರಾಜಕಾರಣ, ದೇಶದ ರಾಜಕಾರಣ ತಲೆ ತಗ್ಗಿಸುವ ಘಟನೆಯಿದು. ನಾಗರಿಕ ಸಮಾಜ ತಲೆ ತಗ್ಗಿಸುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ