Breaking News

ಯಡಿಯೂರಪ್ಪ ಪರ ಎಂ.ಬಿ.ಪಾಟೀಲ ಬ್ಯಾಟಿಂಗ್

Spread the love

ವಿಜಯಪುರ : ಕಾಂಗ್ರೆಸ್ ಪಕ್ಷದ‌ ಲಿಂಗಾಯತ ಸಮುದಾಯದ ಹಿರಿಯ ಶಾಸಕ‌ ಎಂ.ಬಿ.ಪಾಟೀಲ‌ ಮುಖ್ಯಮಂತ್ರಿ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ.

ತಮ್ಮ ಟ್ವಿಟರ್ ಖಾತೆಯಲ್ಲಿ ,ಲಿಂಗಾಯತ ಸಮುದಾಯದ ಧೀಮಂತ ನಾಯಕರಾಗಿರುವ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದ ಅಧಿಕಾರದಿಂದ ಪದಚ್ಯುತಿ ಮಾಡಕೂಡದು. ಒಂದೊಮ್ಮೆ ಬಿಜೆಪಿ ಇಂಥ ಕೆಲಸಕ್ಕೆ ಕೈ ಹಾಕಿದರೆ ಬಿಜೆಪಿ ವರಿಷ್ಠರು ಖಂಡಿತವಾಗಿ ಲಿಂಗಾಯತರ ಅವಕೃಪೆಗೆ ಗುರಿ ಆಗಲಿದ್ದಾರೆ ಎಂದೂ ಎಚ್ಚರಿಸಿದ್ದಾರೆ.

ಯಡಿಯೂರಪ್ಪ ಅವರ ವಯಸ್ಸು, ಪಕ್ಷ ಹಾಗೂ‌ ನಾಡಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ, ಅವರನ್ನು ಘನತೆ, ಗೌರವ, ಮರ್ಯಾದೆಯಿಂದ ನಡೆಸಿಕೊಳ್ಳಬೇಕು ಎಂಬುದು ನನ್ನ ವೈಯಕ್ತಿಕ ಅನಿಸಿಕೆ ಎಂದೂ ಲಿಂಗಾಯತ ಸಮುದಾಯದ‌ ಮುಂಚೂಣಿ ನಾಯಕರೂ ಆಗಿರುವ ಎಂ.ಬಿ.ಪಾಟೀಲ ಬಿಜೆಪಿ ವರಿಷ್ಠರಿಗೆ ಸಲಹೆ ನೀಡಿದ್ದಾರೆ.

 


Spread the love

About Laxminews 24x7

Check Also

ವಿಜಯಪುರದಲ್ಲಿ ಗೃಹ ಬಳಕೆಯ ಅನಿಲ ಅಭಾವ

Spread the loveವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಕೊರತೆ ಸಮಸ್ಯೆ ಮುಂದುವರೆ ದಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಯುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ