Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿ ವಿವಾಹಿತೆಯ ಜೀವ ತೆಗೆಯಿತು ಯುವಕನ ಆ ಒಂದು ವಾಟ್ಸ್​ಆಯಪ್​ ಸ್ಟೇಟಸ್​!

ಬೆಳಗಾವಿ ವಿವಾಹಿತೆಯ ಜೀವ ತೆಗೆಯಿತು ಯುವಕನ ಆ ಒಂದು ವಾಟ್ಸ್​ಆಯಪ್​ ಸ್ಟೇಟಸ್​!

Spread the love

ಬೆಳಗಾವಿ: ವಿವಾಹಿತೆಯೊಬ್ಬಳನ್ನು ಪ್ರೀತಿಸುವುದಾಗಿ ತನ್ನ ಸ್ಟೇಟಸ್​ನಲ್ಲಿ ಯುವಕನೊಬ್ಬ ಬರೆದುಕೊಂಡಿದ್ದು, ಇದರಿಂದ ಹೆದರಿದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸುತಗಟ್ಟಿ ಗ್ರಾಮದಲ್ಲಿ ನಡೆದಿದೆ.

ಸುತಗಟ್ಟಿ ಗ್ರಾಮದ ಅಕ್ಷತಾ ಪೂಜಾರ್ (24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಸುತಗಟ್ಟಿ ಗ್ರಾಮದ ಸಂತೋಷ ತನ್ನ ವಾಟ್ಸ್​ಆಯಪ್​ ಸ್ಟೇಟಸ್​ಗೆ ಅಕ್ಷತಾರ ಫೋಟೋ ಹಾಕಿಕೊಂಡು ಅದರಲ್ಲಿ ಮೆಸೇಜ್​ ಬರೆದಿದ್ದ. ಇದನ್ನು
ನೋಡಿ ಗಾಬರಿಯಿಂದ ಯುವತಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಏಳು ತಿಂಗಳ ಹಿಂದೆ ಕರಡಿಗುದ್ದಿ ಗ್ರಾಮದ ನಾಗರಾಜ್ ಎಂಬುವರ ಜತೆಗೆ ಅಕ್ಷತಾ ಅವರ ವಿವಾಹವಾಗಿತ್ತು. ಕೆಲವು ದಿನಗಳ ನಂತರ ಅವರು ತಮ್ಮ ತವರಿಗೆ ವಾಪಸ್​ ಆಗಿದ್ದರು. ಇದನ್ನು ನೋಡಿದ್ದ ಸಂತೋಷ್​ ತನ್ನ ವಾಟ್ಸ್​ಆಯಪ್​ ಸ್ಟೇಟಸ್​ನಲ್ಲಿ ‘ನಿನ್ನ ಪ್ರೀತಿಸುತ್ತೇನೆ, ನಿನ್ನನ್ನು ಬಿಡುವುದಿಲ್ಲ, ನಿನ್ನ ಹೆಸರು ಬರೆದಿಟ್ಟು ವಿಷ ಕುಡಿದು ಸಾಯುತ್ತೇನೆ’ ಎಂದು ಸ್ಟೇಟಸ್ ಹಾಕಿಕೊಂಡಿದ್ದ. ಜತೆಗೆ ವಿಷವನ್ನೂ ಸೇವಿಸಿದ್ದ.

ಆದರೆ ಸ್ಟೇಟಸ್​ನೋಡಿ ಯು


Spread the love

About Laxminews 24x7

Check Also

ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಗೆ ಜಗದೀಶ್​​ ಶೆಟ್ಟರ್‌ ಕೊಡುಗೆ ಏನು? ಲಕ್ಷ್ಮೀ ಹೆಬ್ಬಾಳ್ಕರ್

Spread the love  ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದು ನನ್ನ ಕರ್ಮ ಭೂಮಿ ಅಂದ್ರೆ ಸುಮ್ಮನಿರಬೇಕಾ? …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ