Breaking News

ಯಡಿಯೂರಪ್ಪ ಅವರೇ ನಿಮಗೆ ವಯಸ್ಸಾಗಿದೆ. ಯಾರಿಗಾದರು ಸಿಎಂ ಪಟ್ಟ ಕಟ್ಟಿ ನೀವು ಹಿಂದಕ್ಕೆ ಸರಿಯಿರಿ.: ನಾಗನ ಗೌಡ

Spread the love

ಯಾದಗಿರಿ: ಬಿಎಸ್ ಯಡಿಯೂರಪ್ಪ ಅವರೇ ನಿಮಗೆ ವಯಸ್ಸಾಗಿದೆ. ಯಾರಿಗಾದರು ಸಿಎಂ ಪಟ್ಟ ಕಟ್ಟಿ ನೀವು ಹಿಂದಕ್ಕೆ ಸರಿಯಿರಿ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ. ಸೂಕ್ತವಾಗಿ ಅಧಿಕಾರ ಬಿಟ್ಟರೆ ಚೆನ್ನಾಗಿರುತ್ತದೆ. ನೀವು ರಾಜೀನಾಮೆ ನೀಡದಿದ್ದರೆ ರಾಜ್ಯದ ಜನರು ದಂಗೆ ಏಳುತ್ತಾರೆ ಅಂತ ಜೆಡಿಎಸ್ ಶಾಸಕ ನಾಗನಗೌಡ ಹೇಳಿದ್ದಾರೆ.

ಈ ಬಗ್ಗೆ ಯಾದಗಿರಿಯಲ್ಲಿನ ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಯಾರಿಗಾದರೂ ಸಲಹೆಗಾರರಾಗಿ, ಬಿಎಸ್ ವೈ ಸಿಎಂ ಸ್ಥಾನ ಉಳಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ಗೆ 5 ಕೋಟಿ ರೂ. ಹಣ ಕೊಟ್ಟಿದ್ದಾರೆ. ಬಿಎಸ್‍ವೈ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ರೆ ಮತ್ತೆ ಯಾರಾದರು ಬರುತ್ತಾರೆ. ಒಳ್ಳೆ ರೀತಿ ಆಡಳಿತ ಕೊಡುವರು ಬಿಜೆಪಿಯಲ್ಲಿದ್ದಾರೆ ಎಂದರು.ಸಚಿವ ಮುರುಗೇಶ್ ನಿರಾಣಿ ವಾರಣಾಸಿ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಸ್ಥಾನಕ್ಕಾಗಿ ಯಾರ್ಯಾರು ದೇವರಿಗೆ ಹೋಗುತ್ತಾರೋ ಗೊತ್ತಿಲ್ಲ. ರಾಜ್ಯದಲ್ಲಿ ಆಡಳಿತ ಮೊರಾಬಟ್ಟೆಯಾಗಿದೆ ರಾಜ್ಯದಲ್ಲಿ ಆಡಳಿತವಿಲ್ಲ. ಬಿಎಸ್‍ವೈ ರಾಜೀನಾಮೆ ನೀಡಿದರೆ ನಮ್ಮವರು ಸಿಎಂ ಕುರ್ಚಿ ಮೇಲೆ ಕುಳಿತುಕೊಳ್ಳಲ್ಲ. ಸಿಎಂ ಬಿಎಸ್‍ವೈ ಆಪರೇಷನ್ ಕಮಲದ ಮೂಲಕ ಆಡಳಿತಕ್ಕೆ ಬಂದಿದ್ದಾರೆ. 2008 ರಲ್ಲಿ ಕೂಡ ಆಪರೇಷನ್ ಕಮಲದ ಮೂಲಕ ಆಡಳಿತಕ್ಕೆ ಬಂದಿದ್ದಾರೆ ಅಂತ ಆರೋಪ ಮಾಡಿದರು. 


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ