ಕಲಬುರಗಿ: ಮುಂಗಾರಿನ ಅಬ್ಬರ ಮಳೆಯಿಂದ ಭೋರ್ಗರೆಯುತ್ತಿದ್ದ ಜಲಪಾತದಲ್ಲಿ ಸೆಲ್ಫಿ ತೆಗೆಯಲು ಹೋಗಿ ಸಂಕಷ್ಟಕ್ಕೆ ಸಿಲುಕಿದ್ದ ಯುವಕರನ್ನು ರಕ್ಷಣೆ ಮಾಡಿರುವ ಘಟನೆ ಚಿಂಚೋಳಿ ತಾಲೂಕಿನ ಎತ್ತಿಪೋತ ಜಲಪಾತ ಬಳಿ ನಡೆದಿದೆ.
ಸತತವಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಭರ್ಜರಿ ಮಳೆಗೆ ಎತ್ತಿಪೋತ ಜಲಪಾತ ಧುಮುಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಆಕರ್ಷಿಸಿದೆ. ಹೀಗೆ ಮೈದುಂಬಿ ಹರಿಯುತ್ತಿರುವ ಜಲಪಾತ ನೋಡಲು ತೆರಳಿದ್ದ ಯುವಕರಿಬ್ಬರು ಸೆಲ್ಫಿ ತೆಗೆಯುವ ದುಸ್ಸಾಹಸಕ್ಕೆ ಮುಂದಾಗಿ ನೀರಿಗಿಳಿದಿದ್ದರು. ಆದರೆ ಜಲಪಾತದ ರಭಸಕ್ಕೆ ನೀರಿನಿಂದ ಹೊರಬರಲಾಗದೆ ಸಂಕಷ್ಟ ಎದುರಿಸಿದ್ದರು.
ನೀರಿನಲ್ಲಿ ಸಿಲುಕಿ ಗಂಟೆಗಟ್ಟಲ್ಲೇ ಜೀವ ಕೈಯಲ್ಲಿಡಿಕೊಂಡು ರಕ್ಷಣೆಗೆಗಾಗಿ ಮೊರೆ ಇಟ್ಟಿದ್ದರು. ಇದನ್ನು ಕಂಡು ಸ್ಥಳದಲ್ಲಿದ್ದ ಇತರೇ ಪ್ರವಾಸಿಗರು ಯುವಕರ ನೆರವಿಗೆ ಬಂದು ಇಬ್ಬರನ್ನು ನಡೆಯಬಹುದಾದ ದುರ್ಘಟನೆಯಿಂದ ಬಚಾವ್ ಮಾಡಿದ್ದಾರೆ.