Breaking News

ನದಿಯಲ್ಲಿ ಹುಚ್ಚು ಸಾಹಸ; ಸೇತುವೆ ಕೆಳಕ್ಕೆ ಉರುಳಿಬಿದ್ದ ಟ್ರ್ಯಾಕ್ಟರ್

Spread the love

ವಿಜಯಪುರ: ಜಿಲ್ಲೆಯಲ್ಲಿ ಡೋಣಿ ನದಿಯ ರಭಸಕ್ಕೆ ಸೇತುವೆಯ ಕೆಳಗೆ ಟ್ರ್ಯಾಕ್ಟರ್ ಉರುಳಿದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಗುಂಡಕಾನಾಳ ಗ್ರಾಮದ ಮಧುಗೌಡ ಪಾಟೀಲ ಅವರ ಎಂಬುವವರಿಗೆ ಸೇರಿದ್ದ ಟ್ರ್ಯಾಕ್ಟರ್ ಹಡಗಿನಾಳ ಮಾರ್ಗದಲ್ಲಿ ಡೋಣಿ ಸೇತುವೆಗೆ ಅಡ್ಡಲಾಗಿ ನಿರ್ಮಿಸಲಾಗಿರುವ ನೆಲಮಟ್ಟದ ಸೇತುವೆಯ ಮೇಲೆ ವಾಹನ ಚಲಾಯಿಸುತ್ತಿರುವಾಗ ಟ್ರ್ಯಾಕ್ಟರ್ ಸೇತುವೆಯ ಕೆಳಗೆ ಉರುಳಿದೆ.

ತಾಳಿಕೋಟಿ ಪಟ್ಟಣದಿಂದ ಮೂಕಿಹಾಳ ಗ್ರಾಮದತ್ತ ಹೊರಟಿದ್ದ ಟ್ರ್ಯಾಕ್ಟರ್ ಡೋಣಿ ನದಿಯ ಮೇಲೆ ಪ್ರವಾಹದ ನೀರು ಇದ್ದರೂ ಕೂಡಾ ಚಾಲಕ ಪ್ರವಾಹದಲ್ಲಿಯೇ ನದಿ ದಾಟಲು ಪ್ರಯತ್ನಿಸಿದ್ದು ನದಿಯ ಸೆಳವಿಗೆ ಸಿಲುಕಿ ನದಿಗೆ ಉರುಳಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ಸೇತುವೆಯ ಸೆಳವಿಗೆ ಸಿಲುಕಿದ್ದ ಟ್ರ್ಯಾಕ್ಟರ್ ಮೇಲೆತ್ತಲು ಜೆಸಿಬಿ ಬಳಸಿ ಅರ್ಧ ಘಂಟೆಗಳ ಕಾಲ ಪ್ರಯತ್ನಿಸಿ ಜೆಸಿಬಿಯ ಸಹಾಯದಿಂದ ಕೊನೆಗೆ ಟ್ರ್ಯಾಕ್ಟರ್ ಮೇಲೆತ್ತಲಾಯಿತು.


Spread the love

About Laxminews 24x7

Check Also

ಜಾತಿ ಗಣತಿ: ‘ಧರ್ಮ’ ಆಯ್ಕೆ ವಿಚಾರದಲ್ಲಿ ಲಿಂಗಾಯತ ಸಮುದಾಯದಲ್ಲಿ ಹೆಚ್ಚುತ್ತಿರುವ ‘ಬಿರುಕು’

Spread the loveಬೆಂಗಳೂರು: ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಆಯೋಗ ಇದೇ ತಿಂಗಳ 22ರಿಂದ ನಡೆಸಲಿರುವ ಜಾತಿ ಗಣತಿಗೂ ಮುನ್ನವೇ ಲಿಂಗಾಯತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ