Breaking News

‘ನೀವು ಬಂದು ಲೈವ್​ ನೋಡಬೇಕು’; ಅಂಜಿಕ್ಯಾ ರಹಾನೆಗೆ ರಾಜ್​ ಕುಂದ್ರಾ ಹೀಗೆ ಹೇಳಿದ್ರು

Spread the love

ನೀಲಿಚಿತ್ರ ನಿರ್ಮಾಣ ಮಾಡುತ್ತಿದ್ದ ಆರೋಪದ ಮೇಲೆ ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಅವರನ್ನು ಬಂಧಿಸಲಾಗಿದೆ. ಅವರ ಬಂಧನದ ನಂತರದಲ್ಲಿ ಸಾಕಷ್ಟು ಹಳೆಯ ಟ್ವೀಟ್​ಗಳು ವೈರಲ್​ ಆಗಿವೆ. ಅಲ್ಲದೆ, ಈ ಬಗ್ಗೆ ಮೀಮ್​ಗಳು ಕೂಡ ಹರಿದಾಡಿದೆ.

ಟೀಂ ಇಂಡಿಯಾ ಟೆಸ್ಟ್​ ತಂಡದ ಉಪನಾಯಕ ಹಾಗೂ ರಾಜ್​ ಕುಂದ್ರಾ 2012ರಲ್ಲಿ ಟ್ವೀಟ್​ ಮೂಲಕ ಸಂಭಾಷಣೆ ನಡೆಸಿದ್ದರು. ರಾಜ್​ ಬಗ್ಗೆ ರಹಾನೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಈ ಟ್ವೀಟ್​ ಈಗ ಸಾಕಷ್ಟು ವೈರಲ್​ ಆಗಿದೆ. ಅಲ್ಲದೆ, ಎಲ್ಲರೂ ಈ ಬಗ್ಗೆ ನಗೆಚಟಾಕಿ ಹಾರಿಸುತ್ತಿದ್ದಾರೆ. ಅಷ್ಟಕ್ಕೂ ರಹಾನೆ ಅವರು ರಾಜ್​ ಕುಂದ್ರಾ ಅವರನ್ನು ಹೊಗಳಿದ್ದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ರಹಾನೆ 2012ರಲ್ಲಿ ರಾಜಸ್ಥಾನ್​ ರಾಯಲ್ಸ್​ ಪರ ಆಡುತ್ತಿದ್ದರು. 2019ರವರೆಗೂ ರಹಾನೆ ಆರ್​ಆರ್​ ತಂಡದ ಪರವಾಗಿಯೆ ಆಡಿದ್ದಾರೆ. 2012ರಲ್ಲಿ ಆರ್​ಆರ್​ ತಂಡದ ಸಹ ಮಾಲೀಕರಾಗಿದ್ದರು ರಾಜ್​ ಕುಂದ್ರಾ. ಈ ಅವಧಿಯಲ್ಲಿ ರಹಾನೆ ಮಾಡಿದ ಟ್ವೀಟ್​ ಈಗ ಟ್ರೋಲ್​ ಪೇಜ್​ಗಳಿಗೆ ಆಹಾರವಾಗಿದೆ.

ಟ್ವೀಟ್​ನಲ್ಲೇನಿತ್ತು?

‘ರಾಜ್​ ಕುಂದ್ರಾ ಸರ್​ ನೀವು ಬಹಳ ಉತ್ತಮ ಕೆಲಸ ಮಾಡುತ್ತಿದ್ದೀರಿ’ ಎಂದು ರಹಾನೆ ಹೇಳಿದ್ದರು. ‘ರಹಾನೆ ಅವರೇ ಧನ್ಯವಾದಗಳು. ನೀವು ಒಮ್ಮೆ ಬಂದು ಲೈವ್​ ನೋಡಬೇಕು’ ಎಂದು ಉತ್ತರಿಸಿದ್ದಾರೆ ರಾಜ್​. ಇದಕ್ಕೆ ‘ಖಂಡಿತವಾಗಿಯೂ ನೋಡುತ್ತೇನೆ’ ಎನ್ನುವ ಉತ್ತರ ರಹಾನೆ ಕಡೆಯಿಂದ ಬಂದಿದೆ.

 

ಮುಂಬೈ ಪೊಲೀಸರು ಹೇಳಿದ್ದೇನು?

‘ಫೆಬ್ರವರಿ 2021ರಂದು ಕ್ರೈಮ್​ ಬ್ರ್ಯಾಂಚ್​ನಲ್ಲಿ ಪ್ರಕರಣ ದಾಖಲಾಗಿತ್ತು. ನೀಲಿ ಸಿನಿಮಾಗಳನ್ನು ಚಿತ್ರೀಕರಣ ಮಾಡಿ, ಕೆಲ ಆಯಪ್​ಗಳ ಮೂಲಕ ಇದನ್ನು ಅಪ್​ಲೋಡ್​ ಮಾಡಲಾಗುತ್ತಿದೆ ಎನ್ನುವ ಮಾಹಿತಿ ನಮಗೆ ಲಭ್ಯವಾಗಿತ್ತು. ಇಂದು (ಜುಲೈ 19) ನಾವು ರಾಜ್​ ಕುಂದ್ರಾ ಅವರನ್ನು ಬಂಧಿಸಿದ್ದೇವೆ. ಇಡೀ ಪ್ರಕರಣದ ರುವಾರಿ ಅವರೇ ಆಗಿದ್ದಾರೆ. ತನಿಖೆ ಪ್ರಗತಿಯಲ್ಲಿದೆ. ತನಿಖೆ ಪೂರ್ಣಗೊಳ್ಳುವವರೆಗೂ ಏನನ್ನೂ ಹೇಳುವುದಿಲ್ಲ’ ಎಂದು ಮುಂಬೈ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ