ಮೈಸೂರು: ಆಶ್ರಯ ಮನೆಗಾಗಿ ವಾಸ ದೃಢೀಕರಣ ಪತ್ರ ಕೇಳಿದ ಮಹಿಳೆಯೊಂದಿಗೆ ಅಸಭ್ಯವಾಗಿ ಮಾತನಾಡಿದ ಮೈಸೂರು ಮಹಾನಗರ ಪಾಲಿಕೆಯ (Mysuru City Corporation) ಜೋನಲ್ ಅಧಿಕಾರಿಗೆ ಮಹಿಳೆಯರು ಧರ್ಮದೇಟು ನೀಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜೋನಲ್ ಅಧಿಕಾರಿ ವಿಷಕಂಠೇಗೌಡ ಎನ್ನುವವರು ಮಹಿಳೆಯೊಂದಿಗೆ ಅಶ್ಲೀಲವಾಗಿ ಮಾತನಾಡಿದ ಆರೋಪ ಎದುರಿಸುತ್ತಿದ್ದು, ಅವರ ವರ್ತನೆಯಿಂದ (Misbehave) ಕುಪಿತರಾದ ಮಹಿಳೆಯರು ಶಾರದಾದೇವಿ ನಗರದ ವಲಯ ಕಚೇರಿಗೆ ನುಗ್ಗಿ ಥಳಿಸಿದ ವಿಡಿಯೋ ಇದೀಗ ವೈರಲ್ (Viral Video) ಆಗಿದೆ.
ಮೈಸೂರು ಮಹಾನಗರ ಪಾಲಿಕೆಯ ಜೋನಲ್ ಅಧಿಕಾರಿ ವಿಷಕಂಠೇಗೌಡ ಹಲ್ಲೆಗೊಳಗಾದ ಅಧಿಕಾರಿಯಾಗಿದ್ದು, ಅವರ ಮೇಲೆ ಮಹಿಳೆಯರು ಗಂಭೀರ ಆರೋಪ ಹೊರಿಸಿದ್ದಾರೆ. ಆಶ್ರಯ ಮನೆಗಾಗಿ ವಾಸ ಧೃಡಿಕರಣ ಪತ್ರಕ್ಕೆ ಮನವಿ ಮಾಡಿದ್ದ ಮಹಿಳೆಯೊಂದಿಗೆ ವಿಷಕಂಠೇಗೌಡ ಅಸಭ್ಯ ಹಾಗೂ ಅಶ್ಲೀಲ ಮಾತುಗಳನ್ನಾಡಿದ್ದರು ಎಂದು ಹೇಳಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯ ಶಾರದಾ ದೇವಿ ನಗರ ವಲಯ ಕಚೇರಿಯಲ್ಲಿ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆದ ನಂತರ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
VIDEO CREDITS TO TV9 KANNADA-