Home / ರಾಜಕೀಯ / ವಾರಣಾಸಿಗೆ ಭೇಟಿ ನೀಡಿದ ಶಾಸಕ ಬೆಲ್ಲದ್; ಕುತೂಹಲ ಮೂಡಿಸಿದ ಸಿಎಂ ಸ್ಥಾನದ ಆಕಾಂಕ್ಷಿಗಳ ಕಾಶಿ ಯಾತ್ರೆ

ವಾರಣಾಸಿಗೆ ಭೇಟಿ ನೀಡಿದ ಶಾಸಕ ಬೆಲ್ಲದ್; ಕುತೂಹಲ ಮೂಡಿಸಿದ ಸಿಎಂ ಸ್ಥಾನದ ಆಕಾಂಕ್ಷಿಗಳ ಕಾಶಿ ಯಾತ್ರೆ

Spread the love

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವದಂತಿ ಬೆನ್ನಲ್ಲೇ ಸಿಎಂ ಸ್ಥಾನದ ಆಕಾಂಕ್ಷಿಗಳು ಕಾಶಿ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ಎರಡು ದಿನಗಳ ಹಿಂದೆ ಗಣಿ ಸಚಿವ ಮುರುಗೇಶ್ ನಿರಾಣಿ ಕಾಶಿ ವಿಶ್ವನಾಥ ದೇವರ ದರ್ಶನ ಪಡೆದು ವಾಪಸ್ ಆಗಿದ್ದ ಬೆನ್ನಲ್ಲೇ ಇದೀಗ ಶಾಸಕ ಅರವಿಂದ್ ಬೆಲ್ಲದ್ ಉತ್ತರ ಪ್ರದೇಶದ ವಾರಣಾಸಿಗೆ ತೆರಳಿದ್ದು, ಕಾಶಿಗೆ ಭೇಟಿ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿರುವ ಇಬ್ಬರು ನಾಯಕರು ಕಾಶಿ ಯಾತ್ರೆ ಮಾಡಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಇಮ್ಮಡಿಗೊಳಿಸಿದೆ.

ಸಿಎಂ ಬದಲಾವಣೆ ಮಾತು ಭಾರಿ ಚರ್ಚೆಯಲ್ಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಚಿವ ನಿರಾಣಿ, ಅರವಿಂದ್ ಬೆಲ್ಲದ್ ಹೆಸರು ಪ್ರಮುಖವಾಗಿ ಕೇಳಿಬರುತ್ತಿದ್ದು, ನಿರಾಣಿ ಕಾಶಿ ವಿಶ್ವನಾಥ ಮಂದಿರಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಇಂದು ಶಾಸಕ ಬೆಲ್ಲದ್ ಕಾಶಿಗೆ ತೆರಳಿರುವುದು ಅಚ್ಚರಿ ಮೂಡಿಸಿದೆ.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ