Breaking News

ಗಾಂಜಾ‌ ನಶೆಯಲ್ಲಿ ಸಿಕ್ಕ ಸಿಕ್ಕ ವಾಹನಗಳ ಗಾಜು ಪುಡಿಮಾಡಿ ಎಸ್ಕೇಪ್

Spread the love

ಬೆಂಗಳೂರು: ಗಾಂಜಾ‌ ನಶೆಯಲ್ಲಿ ಮೂವರು ಪುಂಡರು ವಿಜಯನಗರದ ಆರ್​​ಟಿಪಿಸಿಆರ್​ ಲೇಔಟ್​ನಲ್ಲಿ ತಡರಾತ್ರಿ ಸಿಕ್ಕ ಸಿಕ್ಕ ವಾಹನಗಳ ಗಾಜು ಪುಡಿ ಮಾಡಿದ ಘಟನೆ ನಡೆದಿದೆ. ಅದೇ ಏರಿಯಾದ ಯುವಕರು ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ.

ರಸ್ತೆ ಬದಿ ನಿಲ್ಲಿಸಿದ್ದ ಐದಕ್ಕೂ ಹೆಚ್ಚು ವಾಹನಗಳ ಗ್ಲಾಸ್​ಗಳನ್ನ ಯುವಕರು ಪುಡಿಪುಡಿ ಮಾಡಿದ್ದು ಸಿಸಿಟಿವಿಗಳಲ್ಲಿ ಕೃತ್ಯದ ದೃಶ್ಯ ಸೆರೆಯಾಗಿದೆ. ಯುವಕರು ಕೃತ್ಯ ತಡೆಯಲು ಹೋದವರ ಮೇಲೆ ಕಲ್ಲು ತೂರಿ ಯುವಕರು ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ವಿಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನ ವಶಕ್ಕೆ ಪಡೆದ ಪೊಲೀಸರು ಸದ್ಯ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ