Breaking News
Home / ರಾಜಕೀಯ / ಮಾಮೂಲಿ ಕೊಡದ್ದಕ್ಕೆ ಸುಳ್ಳು ಕೇಸ್ ದಾಖಲಿಸಿದ್ದ ಲೇಡಿ ಇನ್​ಸ್ಪೆಕ್ಟರ್, ಸಬ್​ ಇನ್​ಸ್ಪೆಕ್ಟರ್ ಸೇರಿ ಮೂವರ ಸಸ್ಪೆಂಡ್

ಮಾಮೂಲಿ ಕೊಡದ್ದಕ್ಕೆ ಸುಳ್ಳು ಕೇಸ್ ದಾಖಲಿಸಿದ್ದ ಲೇಡಿ ಇನ್​ಸ್ಪೆಕ್ಟರ್, ಸಬ್​ ಇನ್​ಸ್ಪೆಕ್ಟರ್ ಸೇರಿ ಮೂವರ ಸಸ್ಪೆಂಡ್

Spread the love

ಬೆಂಗಳೂರು: ಮಾಮೂಲಿ ಕೊಡಲಿಲ್ಲ ಎಂಬ ಕಾರಣಕ್ಕೆ ಅಮಾಯಕನ ವಿರುದ್ಧ ಸುಳ್ಳು ಕೇಸ್​ ದಾಖಲಿಸಿದ್ದ ಮಹಿಳಾ ಇನ್​​ಸ್ಪೆಕ್ಟರ್​, ಈ ಪ್ರಕರಣದ ಆಂತರಿಕ ತನಿಖೆ ನಡೆಸುತ್ತಿದ್ದ ಡಿಸಿಪಿ ವಿರುದ್ಧವೇ ಸ್ಟಿಂಗ್ ಆಪರೇಷನ್​ಗೆ ಯತ್ನಿಸಿದ್ದ ಸಬ್​ ಇನ್​ಸ್ಪೆಕ್ಟರ್​ ಸೇರಿ ಮೂವರು ಪೊಲೀಸರನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್​ ಅಮಾನತುಗೊಳಿಸಿದ್ದಾರೆ.

ಆರ್​ಎಂಸಿ ಯಾರ್ಡ್ ಪೊಲೀಸ್ ಇನ್​ಸ್ಪೆಕ್ಟರ್​ ಪಾರ್ವತಮ್ಮ ಹಾಗೂ ಸಬ್​ ಇನ್​ಸ್ಪೆಕ್ಟರ್​ ಅಂಜಿನಪ್ಪ ಹಾಗೂ ಇನ್ನೊಬ್ಬ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಇನ್​ಸ್ಪೆಕ್ಟರ್ ಪಾರ್ವತಮ್ಮ ಹಾಗೂ ಎಸ್‌ಐ ಅಂಜಿನಪ್ಪ ಮತ್ತು ಇನ್ನೊಬ್ಬ ಪೊಲೀಸ್ ಬೀದಿಬದಿ ವ್ಯಾಪಾರಿ ಬಳಿ ಮಾಮೂಲಿ ಕೇಳಿದ್ದು, ಆತ ಕೊಡಲು ನಿರಾಕರಿಸಿದ್ದಕ್ಕೆ ಬಲವಂತವಾಗಿ ಗಾಂಜಾ ಬೆರೆಸಿದ ಸಿಗರೇಟ್​ ಸೇದುವಂತೆ ಮಾಡಿ ಗಾಂಜಾ ಸೇವನೆ ಎಂದು ಕೇಸು ದಾಖಲಿಸಿದ್ದರು. ಬಳಿಕ ಇದರಿಂದ ನೊಂದ ಆತ ಆತ್ಮಹತ್ಯೆಗೆ ಯತ್ನಿಸಿದ್ದ.

ಈ ಕೇಸ್ ಸಂಬಂಧ ಪೊಲೀಸರ ವಿರುದ್ಧ ಆರೋಪ ಕೇಳಿ ಬಂದಿದ್ದು, ಆಂತರಿಕ ತನಿಖೆ ವೇಳೆ ಡಿಸಿಪಿ ವಿರುದ್ಧವೇ ಸ್ಟಿಂಗ್ ಆಪರೇಷನ್​ ಮಾಡಲು ಹೋಗಿ ಎಸ್​ಐ ಅಂಜಿನಪ್ಪ ಸಿಕ್ಕಿಬಿದ್ದಿದ್ದ. ಈ ಮೂವರ ವಿರುದ್ಧ ನಡೆದ ಆಂತರಿಕ ತನಿಖೆಯಲ್ಲಿ ಆರೋಪ ದೃಢಪಟ್ಟು ವರದಿ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ