Breaking News

ಬೆಳಗಾವಿ: ಕೃಷ್ಣೆಗೆ 1.56 ಲಕ್ಷ ಕ್ಯುಸೆಕ್ ನೀರು, ಪ್ರವಾಹ ಭೀತಿ ಹೆಚ್ಚಳ

Spread the love

ಬೆಳಗಾವಿ: ನೆರೆಯ ಮಹಾರಾಷ್ಟ್ರದ ಕೊಂಕಣ ಪ್ರದೇಶ ಮತ್ತು ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ನದಿ ಜಲಾನಯನ ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಕೃಷ್ಣಾ ನದಿಗೆ 1.56 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಇದರೊಂದಿಗೆ ತೀರದಲ್ಲಿ ಪ್ರವಾಹ ಭೀತಿಯೂ ಹೆಚ್ಚಾಗ ತೊಡಗಿದೆ.

ಚಿಕ್ಕೋಡಿ ತಾಲ್ಲೂಕಿನಲ್ಲಿ ದೂಧಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸದಲಗಾ-ಬೋರಗಾಂವ ಸೇತುವೆ ಮುಳುಗಡೆಯಾಗಿದೆ. ಕೊಯ್ನಾ ಜಲಾಶಯದಿಂದ ಹೊರಬಿಡಲಾದ 10ಸಾವಿರ ಕ್ಯುಸೆಕ್, ದೂಧ್‌ಗಂಗಾ ನದಿಯಿಂದ 34,320 ಕ್ಯುಸೆಕ್ ಮತ್ತುಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ ಬರುತ್ತಿರುವ 1.21 ಲಕ್ಷ ಕ್ಯುಸೆಕ್ ಸೇರಿ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ 1.56 ಲಕ್ಷ ಕ್ಯುಸೆಕ್ ನೀರು ಸೇರುತ್ತಿದೆ.


Spread the love

About Laxminews 24x7

Check Also

ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ

Spread the loveಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ