ಪಣಜಿ: ಗೋವಾ ಮತ್ತು ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗೋವಾದ ಜಗತ್ಪ್ರಸಿದ್ಧ ದೂಧಸಾಗರ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು ಈ ಭಾಗದಲ್ಲಿ ದಟ್ಟ ಮಂಜು ಆವರಿಸಿರುವ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಬೆಳಗಾವಿ-ಗೋವಾ ರೈಲು ಸಂಚಾರ ಸ್ಥಗಿತಗೊಂಡಿದೆ.
ಗೋವಾದ ದೂಧಸಾಗರ ಜಲಪಾತದ ಬಳಿ ಭಾರಿ ಪ್ರಮಾಣದಲ್ಲಿ ಮಂಜುಗಟ್ಟಿದ್ದು ಶುಕ್ರವಾರ ಬೆಳಿಗ್ಗೆ ಬೆಳಗಾವಿ -ವಾಸ್ಕೊಡಗಾಮಾ ರೈಲು ಸಂಚಾರ ಜಲಪಾತದ ಬಳಿಯೇ ಸ್ಥಗಿತಗೊಂಡಿದೆ.
ಕೊಂಕಣ ರೈಲು ಹಳಿಗಳ ಮೇಲೆ ಮಳೆಗೆ ಗುಡ್ಡ ಕುಸಿತವುಂಟಾಗಿರುವುದರಿಂದಲೂ ಮುಂಬಯಿ ಮತ್ತು ವಿವಿದೆಡೆಯಿಂದ ಗೋವಾಕ್ಕೆ ಕೆಲ ರೈಲು ಸಂಚಾರ ಬಂದ್ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ.