Breaking News

ಬೆಳಗಾವಿ: ಕುಡಚಿ-ಉಗಾರ ಸೇತುವೆಯಲ್ಲಿ ಸಂಚಾರ ಬಂದ್

Spread the love

ಬೆಳಗಾವಿ: ರಾಯಬಾಗ ತಾಲ್ಲೂಕಿನಾದ್ಯಂತ ಶನಿವಾರವೂ ಜಿಟಿಜಿಟಿ ಮಳೆ ಮಳೆ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ನೆರೆಯ ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದಾಗಿ ಕೃಷ್ಣಾ ನದಿಗೆ ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದಾಗಿ, ರಾಯಬಾಗ ತಾಲ್ಲೂಕಿನ ಕುಡಚಿ-ಉಗಾರ ಸೇತುವೆ ಮುಳುಗಡೆಯಾಗಿದ್ದು, ನೆರೆಯ ಮಹಾರಾಷ್ಟ್ರ ರಾಜ್ಯದ ಸಂಪರ್ಕ ಕಡಿತಗೊಂಡಿದೆ.

ಕುಡಚಿ ಸೇತುವೆ ಮೇಲೆ ಬೆಳಿಗ್ಗೆಯಿಂದಲೇ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ರೈತರು, ವ್ಯಾಪಾರಿಗಳು, ಮೀರಜ್‌ ಆಸ್ಪತ್ರೆಗೆ ಹೋಗುವವರು ತೊಂದರೆ ಅನುಭವಿಸುವಂತಾಗಿದೆ. ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಪ್ರಮುಖ ರಸ್ತೆಗಳು ಹಾಳಾಗಿವೆ. ಬೆಳೆಗಳು ಜಲಾವೃತಗೊಂಡಿವೆ.


Spread the love

About Laxminews 24x7

Check Also

ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ.

Spread the love ಹುಕ್ಕೇರಿ : ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ