Breaking News

ಜೋಶಿ ನಡೆ ಕುತೂಹಲ ಮೂಡಿಸಿದ ಹುಬ್ಬಳ್ಳಿಯಿಂದ ದಿಢೀರ್ ಬೆಂಗಳೂರಿಗೆ ಆಗಮಿಸಿದ್ದಾರೆ.

Spread the love

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತುಗಳು ಜೋರಾಗಿ ಕೇಳಿಬರುತ್ತಿದ್ದು, ಈ ನಡುವೆ ಇಂದು ಸಂಜೆ ವೇಳೆಗೆ ಹೈಕಮಾಂಡ್ ನಿಂದ ಸಂದೇಶ ಬರಲಿದೆ ಎಂಬ ಸಿಎಂ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಿಂದ ದಿಢೀರ್ ಬೆಂಗಳೂರಿಗೆ ಆಗಮಿಸಿದ್ದಾರೆ.

ಮುಖ್ಯಮಂತ್ರಿ ರೇಸ್ ನಲ್ಲಿ ಪ್ರಹ್ಲಾದ್ ಜೋಶಿ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದ್ದು, ಈ ನಡುವೆ ಹುಬ್ಬಳ್ಳಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿ ಗೆದರಿವೆ. ನಿನ್ನೆ ರಾತ್ರಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರಹ್ಲಾದ್ ಜೋಶಿ ಭೇಟಿಯಾಗಿ ಚರ್ಚೆ ನಡೆಸಿದ್ದರು. ಇದೇ ವೇಳೆ ಸಚಿವ ಜಗದೀಶ್ ಶೆಟ್ಟರ್ ಕೂಡ ಆರ್.ಎಸ್.ಎಸ್.ನಾಯಕರನ್ನು ಭೇಟಿಯಾಗಿದ್ದರು. ಈ ಎಲ್ಲಾ ಬೆಳವಣಿಗಗಳ ನಡುವೆ ಇಂದು ಜೋಶಿ ಆರ್.ಎಸ್.ಎಸ್ ಸಭೆಯಲ್ಲಿ ಭಾಗಿಯಾಗುತ್ತಿದ್ದು, ಇದೀಗ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ