Breaking News

ಕಣ್ಣೀರ ಹಿಂದಿನ ನೋವೇನು..?, ಆ ನೋವು ಕೊಟ್ಟವರಾರೆಂಬುದನ್ನು ಬಿಎಸ್‍ವೈ ಬಹಿರಂಗಪಡಿಸಲಿ: ಡಿಕೆಶಿ

Spread the love

ಬೆಂಗಳೂರು: ಇಂದು ರಾಜೀನಾಮೆ ವಿಚಾರ ಪ್ರಸ್ತಾಪಿಸಿ ಬಿ.ಎಸ್ ಯಡಿಯೂರಪ್ಪನವರು ಕಣ್ಣೀರಿಟ್ಟಿದ್ದು, ಇದು ಕೇವಲ ಒಬ್ಬ ವ್ಯಕ್ತಿಯ ಕಣ್ಣೀರಲ್ಲ. ರಾಜ್ಯವನ್ನು ಪ್ರತಿನಿಧಿಸುವ ಮುಖ್ಯಮಂತ್ರಿಯ ಕಣ್ಣೀರಾಗಿತ್ತು. ಇದರ ಹಿಂದಿನ ನೋವೇನು? ಆ ನೋವು ಕೊಟ್ಟವರಾರು? ಎಂಬುದನ್ನು ರಾಜ್ಯದ ಜನರಿಗೆ ತಿಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪನವರ ರಾಜೀನಾಮೆ ಬಗ್ಗೆ ಸದಾಶಿವನಗರ ನಿವಾಸದಲ್ಲಿ ಪ್ರತಿಕ್ರಿಯಿಸಿದ ಶಿವಕುಮಾರ್, ಯಡಿಯೂರಪ್ಪ ಅವರ ರಾಜೀನಾಮೆ ಹಿಂದೆ ಸಂತೋಷ ಕಾಣುತ್ತಿಲ್ಲ. ಬದಲಿಗೆ ಅವರ ನಿರ್ಧಾರದಲ್ಲಿ ನೋವು ಕಾಣುತ್ತಿದೆ. ಆ ನೋವು ಏನು..? ಆ ನೋವು ಕೊಟ್ಟವರು ಯಾರು..? ಎಂಬುದನ್ನು ಮುಖ್ಯಮಂತ್ರಿಗಳು ರಾಜ್ಯದ ಜನರಿಗೆ ಸ್ಪಷ್ಟಪಡಿಸಬೇಕು.


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ