ಬೆಂಗಳೂರು: ಬಿಜೆಪಿ ಕಟ್ಟಾಳು ಬಿಎಸ್ ಯಡಿಯೂರಪ್ಪ ನಿನ್ನೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ತಾವು ರಾಜೀನಾಮೆ ನಿರ್ಧರಿಸಿರುವುದನ್ನು ಹೇಳುವಾಗ ಯಡಿಯೂರಪ್ಪ ಗದ್ಗದಿತರಾದರು ಆ ಕ್ಷಣ ಅವರ ಅಭಿಮಾನಿಗಳಷ್ಟೇ ಅಲ್ಲದೇ ರಾಜ್ಯದ ಪ್ರತಿಯೊಬ್ಬರಿಗೂ ಬೇಸರವಾಗಿತ್ತು.
ಇದೀಗ ಬಿಎಸ್ವೈ ಅವರು ತಮ್ಮ ನಿವಾಸದಲ್ಲಿ ಕಾಲಕಳೆಯುತ್ತಿದ್ದು, ಬೆಳ್ಳಂಬೆಳಿಗ್ಗೆ ನಿವಾಸದಲ್ಲಿರುವ ಹಸುಗಳನ್ನು ಮುದ್ದಾಡಿದ್ದಾರೆ. ಸದ್ಯ ರಾಜಕೀಯ ಜಂಜಾಟಗಳನ್ನು ಬದಿಗೊತ್ತಿ, ಎಸ್.ಆರ್.ವಿಶ್ವನಾಥ್ ತಂದು ಕೊಟ್ಟಿದ್ದ ಹಸುಗಳ ಜೊತೆ ಸಮಯ ಕಳೆದಿದ್ದಾರೆ. ಇನ್ನು ಈ ಹಸುಗಳ ಮೇಲೆ ಯಡಿಯೂರಪ್ಪ ವಿಶೇಷ ಕಾಳಜಿ ಹೊಂದಿದ್ದಾರೆ ಎನ್ನಲಾಗಿದೆ.