Breaking News

ಕಾಲು ಜಾರಿ ನೀರಿಗೆ ಬಿದ್ದು ನಾಲ್ವರು ಮಕ್ಕಳು ಸಾವು

Spread the love

ವಿಶಾಖಪಟ್ಟಣ: ಮಳೆಗೆ ತುಂಬಿ ಹರಿಯುತಿದ್ದ ಹೊಳೆಯೊಳಗೆ ಜಾರಿ ಬಿದ್ದು ನಾಲ್ವರು ಮಕ್ಕಳು ದುರಂತ ಸಾವಿಗೀಡಾಗಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ವಿಶಾಖಪಟ್ಟಣ ಜಿಲ್ಲೆಯ ವಿ. ಮಡುಗುಲಾ ಮಂಡಲ್​ ಜಮ್ಮದೇವಿಪೇಟಾ ಗ್ರಾಮದಲ್ಲಿ ಘಟನೆ ನಡೆದಿದ್ದು ಮೃತ ಮಕ್ಕಳನ್ನು ಜಾಹ್ನವಿ (11) ಝಾನ್ಸಿ (8), ಶರ್ಮಿಳಾ (7) ಮತ್ತು ಮಹೀಂದರ್​ (7) ಎಂದು ಗುರುತಿಸಲಾಗಿದೆ.
ಸೋಮವಾರ ಮಧ್ಯಾಹ್ನ ಪಾಲಕರು ಬಟ್ಟೆ ಹೊಗೆಯಲು ಹೋಗಿದ್ದರು. ಮಕ್ಕಳು ಸಹ ಜತೆಯಲ್ಲಿ ತೆರಳಿದ್ದರು. ಈ ವೇಳೆ ನೀರಿನ ಹಳ್ಳವನ್ನು ದಾಟುವಾಗ ಆಕಸ್ಮಿಕವಾಗಿ ಹಳ್ಳದ ಒಳಗೆ ಬಿದ್ದು ನೀರಿನಲ್ಲಿ ಮುಳುಗಿ ಮಕ್ಕಳು ಮೃತಪಟ್ಟಿದ್ದಾರೆ. ಮಕ್ಕಳ ಸಾವಿನಿಂದ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ