Home / ರಾಜಕೀಯ / ಸಂಕಷ್ಟಗಳನ್ನು ಮೆಟ್ಟಿನಿಂತು ಶಿಕ್ಷಕಿಯಾದ ಯುವತಿಗೆ ರಾಜಭವನಕ್ಕೆ ಆಹ್ವಾನಿಸಿದ ರಾಜ್ಯಪಾಲರು..!

ಸಂಕಷ್ಟಗಳನ್ನು ಮೆಟ್ಟಿನಿಂತು ಶಿಕ್ಷಕಿಯಾದ ಯುವತಿಗೆ ರಾಜಭವನಕ್ಕೆ ಆಹ್ವಾನಿಸಿದ ರಾಜ್ಯಪಾಲರು..!

Spread the love

ಕುಮಿಲಿ: ಅನೇಕ ಸಂಕಷ್ಟಗಳನ್ನು ಮೆಟ್ಟಿ ನಿಂತು ಹೈಸ್ಕೂಲ್​ ಶಿಕ್ಷಕಿಯಾದ ಕೇರಳದ ಛೋಟ್ಟುಪರಾ ನಿವಾಸಿ ಸೆಲ್ವಮರಿಯನ್ನು ರಾಜ್ಯಪಾಲ ಆರೀಫ್​ ಮೊಹಮ್ಮದ್​ ಖಾನ್​ ಅಭಿನಂದಿಸಿದ್ದು, ರಾಜಭವನಕ್ಕೆ ಆಹ್ವಾನಿಸಿದ್ದಾರೆ.

ಬಾಲ್ಯದ ದಿನಗಳಿಂದಲೂ ಸೆಲ್ವಮರಿ ಅನೇಕ ಸಮಸ್ಯೆಗಳನ್ನು ಎದುರಿಸಿದ್ದಾರೆ. ರಜಾದಿನಗಳಲ್ಲಿ ತಮ್ಮ ತಾಯಿಯ ಜತೆ ಏಲಕ್ಕಿ ತೋಟದಲ್ಲಿ ಕೆಲಸ ಮಾಡಿಕೊಂಡು ಕುಟುಂಬಕ್ಕೆ ಆಧಾರವಾಗಿ ನಿಲ್ಲುತ್ತಿದ್ದ ಸೆಲ್ವಮರಿ, ಕೆಲಸದ ನಡುವೆಯೂ ಓದಿನಲ್ಲೂ ಶ್ರಮವಹಿಸಿ ಇಂದು ಹೈಸ್ಕೂಲ್​ ಶಿಕ್ಷಕಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕುಟುಂಬದ ಸಂಕಷ್ಟಗಳನ್ನು ಇನ್ನಷ್ಟು ದೂರ ಮಾಡಿದ್ದಾರೆ.

ಸೆಲ್ವಮರಿ ಬಗ್ಗೆ ಮಾಧ್ಯಮಗಳು ಮಾಡಿದ್ದ ವರದಿಯನ್ನು ಗಮನಿಸಿ ಆಕೆಯನ್ನು ಕೇರಳ ರಾಜ್ಯಪಾಲರು ರಾಜಭವನಕ್ಕೆ ಆಹ್ವಾನಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಆಕೆ ರಾಜ್ಯಪಾಲರ ಕರೆಯನ್ನು ನಿರೀಕ್ಷಿಸಿರಲಿಲ್ಲ. ನನಗೆ ಏನು ಮಾತನಾಡಬೇಕೆಂಬುದು ತಿಳಿಯಲಿಲ್ಲ ಎಂದು ಹೇಳಿಕೊಂಡಿದ್ದಾರೆ.

ತನ್ನ ಯಶಸ್ಸಿನ ಬಗ್ಗೆ ಮಾತನಾಡಿರುವ ಸೆಲ್ವಮರಿ ಮುಂದಿನ ಪೀಳಿಗೆಗೆ ನನ್ನ ಸ್ಟೋರಿ ಸ್ಫೂರ್ತಿ ನೀಡಲಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ