Breaking News

ಬಿಎಸ್ ವೈ ಬಲಗೈ ಬಂಟ ಬಸವರಾಜ ಬೊಮ್ಮಾಯಿ..ಕರ್ನಾಟಕದ ನೂತನ ಮುಖ್ಯಮಂತ್ರಿ..

Spread the love

ಬೆಂಗಳೂರು – ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಎಂದು ಗೊತ್ತಾಗಿದೆ.

ಅಧಿಕೃತವಾಗಿ ಘೋಷಣೆ ಇನ್ನೂ ಆಗಬೇಕಿದೆ.

ಬೆಂಗಳೂರಿನ ಕ್ಯಾಪಿಟಲ್ ಹೊಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಪಕ್ಷದ ವೀಕ್ಷಕರ ಉಪಸ್ಥಿತಿಯಲ್ಲಿ ಈ ಘೋಷಣೆಯಾಗಿದೆ. ಬಿ.ಎಸ್.ಯಡಿಯೂರಪ್ಪ ರಾಜಿನಾಮೆಯಿಂದಾಗಿ ತೆರವಾಗಿರುವ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ಬಂದಿದೆ.

ಬಸವರಾಜ ಬೊಮ್ಮಾಯಿ ಯಡಿಯೂರಪ್ಪ ಸಂಪುಟದಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು.

ಬಸವರಾಜ ಬೊಮ್ಮಾಯಿ ಮಾಜಿ ಮುಖ್ಯಮಂತ್ರಿ ದಿ.ಎಸ್.ಆರ್.ಬೊಮ್ಮಾಯಿ ಅವರ ಪುತ್ರ. ಜನತಾ ಪರಿವಾರದಲ್ಲಿದ್ದ ಅವರು 2004ರಲ್ಲಿ ಬಿಜೆಪಿ ಸೇರಿದ್ದಾರೆ.

ಬುಧವಾರವೇ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ