Breaking News

ಸಿಎಂ ಬಸವರಾಜ ಬೊಮ್ಮಾಯಿ ಶ್ಯಾಡೋ ಆಗಿ ಕೆಲಸ ಮಾಡಬಾರದು : ಬಸವನಗೌಡ ಪಾಟೀಲ್ ಯತ್ನಾಳ್

Spread the love

ಬೆಂಗಳೂರು : ಕರ್ನಾಟಕದ 30 ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.

 

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಗ್ಗೆ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸಿಎಂ ಬಸವರಾಜ ಬೊಮ್ಮಾಯಿ ಶ್ಯಾಡೋ ಆಗಿ ಕೆಲಸ ಮಾಡಲ್ಲ. ಬಿ.ಎಸ್.ಯಡಿಯೂರಪ್ಪ ಕುಟುಂಬದಿಂದ ದೂರ ಉಳಿದು ಕೆಲಸ ಮಾಡುತ್ತಾರೆ. ರಾಜ್ಯದಲ್ಲಿ ಬದಲಾವಣೆ ಆಗುತ್ತೆ ನೋಡುತ್ತೀರಿ. ಬಿಜೆಪಿ ಶಾಸಕರ ವಿಶ್ವಾಸ ಗಳಿಸುವ ಕೆಲಸ ಮಾಡುತ್ತಾರೆ. ಹೈಕಮಾಂಡ್ ಆದೇಶ ಮಾಡಿದರೆ ನಾನು ಸಚಿವನಾಗುತ್ತೇನೆ ಎಂದು ಹೇಳಿದ್ದಾರೆ.

 

ಇನ್ನು ಯಡಿಯೂರಪ್ಪ ನಿರ್ಗಮನದ ಬಳಿಕ ಕೆಟ್ಟದಾಗಿ ಮಾತನಾಡಬಾರದು. ಕೆಟ್ಟದಾಗಿ ಮಾತನಾಡುವುದು ಬುದ್ಧಿವಂತರ ಲಕ್ಷಣವಲ್ಲ. ಯಡಿಯೂರಪ್ಪ ಅವರ ಜೀವನ ನೆಮ್ಮದಿ, ಸುಖಕರವಾಗಿರಲಿ ಎಂದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ