Breaking News

ಕೃಷ್ಣಾ ನದಿ ಪ್ರವಾಹ: ಕುಲಹಳ್ಳಿ ಗ್ರಾಮದ 100 ಕುಟುಂಬಗಳು ಸ್ಥಳಾಂತರ

Spread the love

ಬನಹಟ್ಟಿ: ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ರಬಕವಿ ಬನಹಟ್ಟಿ ತಾಲ್ಲೂಕಿನ ಕುಲಹಳ್ಳಿ ಗ್ರಾಮದ 100 ಕ್ಕೂ ಹೆಚ್ಚು ಕುಟುಂಬಗಳ ಅಂದಾಜು ೩೦೦ ಕ್ಕೂ ಹೆಚ್ಚು ಜನರನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.

ಗ್ರಾಮದ ಮೋರೆ ಮತ್ತು ಗಸ್ತಿ ಪ್ರದೇಶದ ಜನರು ಪ್ರವಾಹದಿಂದ ತೊಂದರೆಗೆ ಒಳಗಾಗಿದ್ದಾರೆ. ಅದೇ ರೀತಿಯಾಗಿ ನದಿ ತೀರದ ತೋಟ ಹಾಗೂ ಹೊಲಗಳಲ್ಲಿ ವಾಸವಿದ್ದ ಜನರನ್ನು ಕೂಡಾ ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.

ಮೋರೆ ಮತ್ತು ಗಸ್ತಿ ಪ್ರದೇಶದ ಜನರನ್ನು ಗ್ರಾಮದ ಸರ್ಕಾರಿ ಶಾಲೆಗಳಲ್ಲಿ ಹಾಗೂ ಶಾಲೆಯ ಆವರಣದಲ್ಲಿರುವ ಪತ್ರಾಸ ಶೆಡ್‌ಗಳಲ್ಲಿ ಸ್ಥಳಾಂತರಿಸಲಾಗಿದೆ. ಇಲ್ಲಿಯ ಜನರಿಗೆ ಬಿಸಿಯೂಟದ ವ್ಯವಸ್ಥೆಯನ್ನು ಮಾಡಿದ್ದು, ಗ್ರಾಮದ ಜನರು ಕೂಡಾ ಸಂತ್ರಸ್ತರಿಗೆ ಊಟದ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ.

ಕೃಷ್ಣಾ ನದಿಯಲ್ಲಿಯ ಅಪಾರ ಪ್ರಮಾಣದ ನೀರಿನಿಂದಾಗಿ ಕುಲಹಳ್ಳಿ ಹಾಗೂ ಹಿಪ್ಪರಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಹಾಗೂ ಗೊಂಬಿಗುಡ್ಡ ಮೂಲಕ ಆಸಂಗಿಗೆ ಹೋಗುವ ತೋಟದ ರಸ್ತೆ ಕೂಡಾ ಜಲಾವೃತಗೊಂಡಿವೆ.

ಇಟ್ಟಂಗಿ ಭಟ್ಟಿಗಳು ನೀರಿನಲ್ಲಿ: ಕುಲಹಳ್ಳಿ ಗ್ರಾಮಕ್ಕೆ ಹೊಂದಿಕೊಂಡಿರುವ ಹತ್ತಾರು ಇಟ್ಟಂಗಿ ಭಟ್ಟಿಗಳು ಸಂಪೂರ್ಣವಾಗಿ ನೀರಿನಲ್ಲಿ ನಿಂತಿವೆ. ಮುಂದಿನ ದಿನಗಳಲ್ಲಿ ಲಕ್ಷಾಂತರ ಇಟ್ಟಂಗಿಗಳಿಗೆ ಇದರಿಂದ ಭಾರಿ ಹಾನಿಯಾಗಲಿದೆ.

ಸೋಮವಾರದಿಂದ ಕುಲಹಳ್ಳಿ ಗ್ರಾಮದಲ್ಲಿ ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಜನರಿಗೆ ಊಟದ, ಜಾನುವಾರುಗಳಿಗೆ ಮೇವಿನ ಹಾಗೂ ಎಲ್ಲ ರೀತಿಯ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಹಶೀಲ್ದಾರ್ ಸಂಜಯ ಇಂಗಳೆ ತಿಳಿಸಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ