Breaking News
Home / ಜಿಲ್ಲೆ / ಬೆಂಗಳೂರು ಗ್ರಾಮಾಂತರ / ನಕಲಿ ಕೀ ಬಳಸಿ ನಿರ್ಮಾಪಕನ ಮನೆಗೆ ಕನ್ನ, ಇಬ್ಬರು ಆರೋಪಿಗಳು ಅರೆಸ್ಟ್

ನಕಲಿ ಕೀ ಬಳಸಿ ನಿರ್ಮಾಪಕನ ಮನೆಗೆ ಕನ್ನ, ಇಬ್ಬರು ಆರೋಪಿಗಳು ಅರೆಸ್ಟ್

Spread the love

ಬೆಂಗಳೂರು: ನಕಲಿ ಕೀ ಬಳಸಿ ನಿರ್ಮಾಪಕನ ಮನೆಗೆ ಕನ್ನ ಹಾಕಿದ್ದ ಇಬ್ಬರು ಖದೀಮರನ್ನು ಬೆಂಗಳೂರಿನ ಹನುಮಂತನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಂದ್ರಶೇಖರ್(32), ಅಭಿಷೇಕ್(34) ಬಂಧಿತ ಆರೋಪಿಗಳು.

ಆರೋಪಿ ಚಂದ್ರಶೇಖರ್ ನಿರ್ಮಾಪಕ ರಮೇಶ್ ಕಶ್ಯಪ್ ಅವರ ಕಾರು ಚಾಲಕನಾಗಿದ್ದ. ಜುಲೈ 10ರಂದು ಆರೋಪಿ ತನ್ನ ಮಾಲೀಕನ ಮನೆಗೆ ಕನ್ನ ಹಾಕಿದ್ದಾನೆ. ಅಭಿಷೇಕ್ ಜೊತೆ ಸೇರಿಕೊಂಡು ಕಳ್ಳತನಕ್ಕೆ ಹೊಂಚು ಹಾಕಿ 3 ಲಕ್ಷ ನಗದು, 710 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಬಳಿಕ ರಮೇಶ್ ಕಶ್ಯಪ್ ಈ ಘಟನೆ ಸಂಬಂಧ ಹನುಮಂತನಗರ ಠಾಣೆಗೆ ಹೋಗಿ ದೂರು ನೀಡಿದ್ದರು. ದೂರನ್ನು ಆಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ಖದೀಮರಿಂದ 3 ಲಕ್ಷ ರೂ. ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಕದ್ದಿರುವ ಚಿನ್ನ ಅಡವಿಟ್ಟು ಹಣ ಪಡೆದಿದ್ದ ಎಂದು ತಿಳಿದು ಬಂದಿದೆ.

ಇನ್ನು ಆರೋಪಿ ಮನೆಯ ಅಸಲಿ ಕೀಯನ್ನು ತೆಗೆದುಕೊಂಡು ಹೋಗಿ ನಕಲಿ ಕೀ ಮಾಡಿಸಿಕೊಂಡು ಬಂದಿದ್ದ. ಸುಳಿವು ಸಿಗಬಾರದೆಂದು ತನ್ನ ಸ್ನೇಹಿತ ಅಭಿಷೇಕ್ ಮೂಲಕ ಮನೆಗೆ ಕನ್ನ ಹಾಕಿಸಿದ್ದ. ಕದ್ದ ಚಿನ್ನ ಅಡವಿಟ್ಟು ಹಣ ಪಡೆದಿದ್ದ. ಸಿಸಿಟಿವಿ ಹಾಗೂ ಟವರ್ ಲೊಕೇಶನ್ ಆಧರಿಸಿ ಪೊಲೀಸರು ಚಂದ್ರಶೇಖರ್ ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಅಸಲಿ ಸತ್ಯ ಬಯಲಾಗಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ