Breaking News

ಸಿಎಂ ಬೊಮ್ಮಾಯಿ ನಿವಾಸದ ಎದುರೇ ಬೈಕ್ ವ್ಹೀಲಿಂಗ್​ ಮಾಡ್ತಿದ್ದ ಪುಂಡರ ಬಂಧನ

Spread the love

ಬೆಂಗಳೂರು: ನೂತನ ಸಿಎಂ ಬಸವರಾಜ್​ ಬೊಮ್ಮಾಯಿಯವರ ಆರ್. ಟಿ ನಗರದ ಮನೆ ಸುತ್ತಮುತ್ತ ಬೈಕ್​ ವ್ಹೀಲಿಂಗ್​ ಮಾಡುವ ಪುಂಡರ ಹಾವಳಿ ಹೆಚ್ಚಾಗಿದೆ. ಸಿಎಂ ಮನೆ ಮುಂದೆ ವ್ಹೀಲಿಂಗ್​ ಮಾಡುತ್ತಿದ್ದ ಪುಂಡರನ್ನು ಪೊಲೀಸರು ಬಂಧಿಸಿದ್ದು ಬೈಕ್​ಗಳನ್ನ ಸೀಜ್​ ಮಾಡಿದ್ದಾರೆ.

ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಮನೆ ಸುತ್ತಮುತ್ತ ಪೊಲೀಸ್​ರ ದಂಡೆ ಇದ್ದರು ಕ್ಯಾರೆ ಎನ್ನದ ಪುಂಡರ ಗುಂಪು ವ್ಹೀಲಿಂಗ್ ಮಾಡುತ್ತಿದ್ದರು. ಡಿಯೋ, ಌಕ್ಟಿವಾ ಬೈಕ್ ಗಳಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ನಾಲ್ವರ ಗ್ಯಾಂಗ್​ನ್ನು ಪೊಲೀಸರು ತಡೆಯಲು ಹೋದಾಗ ಪೊಲೀಸರ ಮೇಲೆಯೆ ಬೈಕ್​ ಹತ್ತಿಸೋ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.

ಕೊನೆಗೆ ಸಿಎಂ ಮನೆ ಭದ್ರತಾ ಸಿಬ್ಬಂದಿಗಳು ಪುಂಡರನ್ನು ಹಿಡಿದು ಆರ್​.ಟಿ. ನಗರ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಮೂವರನ್ನು ವಶಕ್ಕೆ ಪಡೆದಿರೋ ಪೊಲೀಸರು ಎರಡು ಬೈಕ್​ಗಳನ್ನು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಕಾಗವಾಡ ತಾ.ಶೇಡಬಾಳದ ಬಿಎಸ್ಎಫ್ ಯೋಧ ಅನಾರೋಗ್ಯದಿಂದ ನಿಧನ

Spread the love ಕಾಗವಾಡ ತಾ.ಶೇಡಬಾಳದ ಬಿಎಸ್ಎಫ್ ಯೋಧ ಅನಾರೋಗ್ಯದಿಂದ ನಿಧನ ಬಿಎಸ್ಎಫ್ ಯೋಧ ದಗಡು ಪೂಜಾರಿ ರಜೆಯ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ