ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಬಿ.ಎಸ್.ಯಡಿಯೂರಪ್ಪ ಆರ್ ಎಸ್ ಎಸ್ ನಾಯಕರನ್ನು ಭೇಟಿಯಾಗಿ ಚರ್ಚಿಸಿರುವುದು ಕುತೂಹಕ್ಕೆ ಕಾರಣವಾಗಿದೆ.
ಬೆಂಗಳೂರಿನ ಕೇಶವ ಕೃಪಾ ಆರ್ ಎಸ್ ಎಸ್ ಕಚೇರಿಗೆ ತೆರಳಿರುವ ಯಡಿಯೂರಪ್ಪ ಆರ್ ಎಸ್ ಎಸ್ ಮುಖಂಡ ಮುಕುಂದ್ ಹಾಗೂ ಹಲವು ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಈಗಾಗಲೇ ರಾಜ್ಯಪಾಲರ ಹುದ್ದೆ ಬೇಡವೆಂದಿರುವ ಯಡಿಯೂರಪ್ಪನವರನ್ನು ಮನವೊಲಿಕೆ ಮಾಡುವ ನಿಟ್ಟಿನಲ್ಲಿ ಮುಖಂಡರು ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.