Breaking News

ಸಿಎಂಗೂ ಮೊದಲೇ ದೆಹಲಿ ಸೇರಿರುವ ಸಚಿವಾಕಾಂಕ್ಷಿಗಳು; ಮಂತ್ರಿ ಸ್ಥಾನಕ್ಕಾಗಿ ಎಂ.ಪಿ.ಕುಮಾರಸ್ವಾಮಿ ನೇರ ಲಾಬಿ

Spread the love

ನವದೆಹಲಿ: ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ಬಸವರಾಜ್ ಬೊಮ್ಮಾಯಿ ದೆಹಲಿಗೆ ತೆರಳಿದ್ದು, ಸಿಎಂ ದೆಹಲಿ ಭೇಟಿಗೂ ಮೊದಲೇ ಸಚಿವಾಕಾಂಕ್ಷಿಗಳು ರಾಷ್ಟ್ರ ರಾಜಧಾನಿಯಲ್ಲಿ ಬೀಡುಬಿಟ್ಟಿದ್ದಾರೆ.

ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಮಂತ್ರಿ ಸ್ಥಾನಕ್ಕಾಗಿ ನೇರವಾಗಿ ವರಿಷ್ಠರ ಬಳಿ ಲಾಬಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಕುಮಾರಸ್ವಾಮಿ, ಈ ಹಿಂದೆ 17 ಶಾಸಕರಿಗೆ ಮಂತ್ರಿ ಸ್ಥಾನ ನೀಡಲೇಬೇಕು ಎಂಬ ಅನಿವಾರ್ಯ ಇತ್ತು ಹಾಗಾಗಿ ನಾವೆಲ್ಲ ತಾಳ್ಮೆಯಿಂದ ಇದ್ದೆವು. ಆದರೆ ಈಗ ಪರಿಸ್ಥಿತಿ ಬದಲಾಗಿ, ಸಿಎಂ ಕೂಡ ಬದಲಾಗಿದ್ದಾರೆ. ಈಗ ನಮಗೆ ಮಂತ್ರಿ ಸ್ಥಾನ ನೀಡಬೇಕು ಎಂಬುದು ನಮ್ಮ ಬೇಡಿಕೆ ಎಂದರು.

ಅಮಿತ್ ಶಾ, ಜೆ.ಪಿ.ನಡ್ಡಾ ಭೇಟಿಗೆ ಸಮಯ ಕೇಳಿದ್ದು, ಇನ್ನೂ ಹಲವು ಹಿರಿಯರನ್ನು ಭೇಟಿಯಾಗಿ ಚರ್ಚಿಸುವುದಾಗಿ ತಿಳಿಸಿದರು. ಒಟ್ಟಾರೆ ಸಿಎಂ ದೆಹಲಿ ಭೇಟಿ ವೇಳೆಯೇ ಸಚಿವಾಕಾಂಕ್ಷಿಗಳು ವರಿಷ್ಠರ ಮೂಲಕ ಒತ್ತಡ ಹೇರುವ ತಂತ್ರ ನಡೆಸಿದ್ದಾರೆ.


Spread the love

About Laxminews 24x7

Check Also

ಬೆಂಗಳೂರಿನಲ್ಲಿ ರಾತ್ರಿಯಿಡೀ ಮಳೆಯ ಅಬ್ಬರ

Spread the love ಬೆಂಗಳೂರು: ನಗರದಲ್ಲಿ ತಡರಾತ್ರಿ ನಿರಂತರವಾಗಿ ಸುರಿದ ಮಳೆ ಹಲವೆಡೆ ಅವಾಂತರಗಳನ್ನು ಸೃಷ್ಟಿಸಿದೆ. ಶುಕ್ರವಾರ ರಾತ್ರಿ 9 ಗಂಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ