Breaking News

ಕೆರೆಗೆ ಉರುಳಿದ KSRTC ಬಸ್​​​-

Spread the love

ಶಿವಮೊಗ್ಗ: ಎದುರಿಗೆ ಬಂದ ಬೈಕ್​ ತಪ್ಪಿಸಲು ಹೋಗಿ ಕೆಎಸ್​ಆರ್​ಟಿಸಿ ಬಸ್ಸೊಂದು ಕೆರೆಗೆ ಉರುಳಿರುವ ಘಟನೆ ಸಾಗರ ತಾಲೂಕಿನ ಉಳ್ಳೂರು ಕಾಸ್ಪಾಡಿ ಕ್ರಾಸ್ ನ ಬಳಿ ನಡೆದಿದೆ.

 

 

ಸಾಗರದಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ಗೆ ಬೈಕೊಂದು ಎದುರಾಗಿದೆ. ಈ ಸಂದರ್ಭದಲ್ಲಿ ಬಸ್​ ಬೈಕ್​ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ ಎನ್ನಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಕೆರೆಗೆ ಉರುಳಿದೆ.

ಪರಿಣಾಮ ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಗೊಂಡವರನ್ನು ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಬೈಕ್​ ಸವಾರರಾದ ದೀಪಕ ಮತ್ತು ಪ್ರಜ್ವಲ್​ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ