Breaking News

ಕೃಷ್ಣಾ ನದಿ ಅವಾಂತರ: ಗುಡಿಸಲಿಗೆ ನುಗ್ಗಿದ ನೀರು; ಹೊರಬರಲು ಪರದಾಡಿದ ಮೀನುಗಾರರು

Spread the love

ಯಾದಗಿರಿ: ಕೃಷ್ಣಾ ನದಿಗೆ ನೀರು ಬಿಟ್ಟ ಕಾರಣ ಮೀನುಗಾರರ ಗುಡಿಸಲುಗಳಿಗೆ ನೀರು ನುಗ್ಗಿದೆ. ಇದರ ಪರಿಣಾಮ ಜಲಾವೃತಗೊಂಡ ಮನೆಗಳಿಂದ ಹೊರಬರಲು ಮೀನುಗಾರರು ಪರದಾಡಿದ ಘಟನೆ ಜಿಲ್ಲೆಯ ವಡಗೇರಾ ತಾಲೂಕಿನ ಕದರಾಪುರದಲ್ಲಿ ನಡೆದಿದೆ.

ಕೃಷ್ಣಾ ನದಿಗೆ 4 ಲಕ್ಷ 20 ಸಾವಿರ ಕ್ಯೂಸೆಕ್ ನೀರು ಬಿಟ್ಟ ಪರಿಣಾಮ ಕದರಾಪುರದ 40 ಮೀನುಗಾರರ ಗುಡಿಸಲುಗಳು ಜಲಾವೃತಗೊಂಡಿವೆ. ಅಪಾರ ಪ್ರಮಾಣದಲ್ಲಿ ನೀರು ಗುಡಿಸಲು ನುಗ್ಗಿದ್ದರಿಂದ ಹೊರಬರಲು ಪರದಾಡಿದ ಮೀನುಗಾರರು ತೆಪ್ಪದ ಮೂಲಕ ಹೊರ ಬಂದಿದ್ದಾರೆ.

ಸದ್ಯ ತುಂಬಿ ಹರಿಯುತ್ತಿರುವ ಕೃಷ್ಣಾ ನದಿ ತೀರದ ಬಂಡೆಯ ಮೇಲೆ ಬೀಡು ಬಿಟ್ಟಿರುವ ಮೀನುಗಾರರ ಕುಟುಂಬ ನೆಲೆಸಲು ಶಾಶ್ವತ ಸ್ಥಳವಿಲ್ಲದೆ ಅಂತಂತ್ರ ಸ್ಥಿತಿಯಲ್ಲಿದ್ದಾರೆ. ಚಿಕ್ಕ ಚಿಕ್ಕ ಮಕ್ಕಳನ್ನು ಕಟ್ಟಿಕೊಂಡು ಪರದಾಡುತ್ತಿರೋ ಮೀನುಗಾರರು, ನಾಲ್ಕು ದಿನದಿಂದ ಪರದಾಡುತ್ತಿದ್ದರೂ ಜಿಲ್ಲಾಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನ ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನಕೇಂದ್ರವಾಗಿ ಬೆಳೆಯಲಿ: ಸಚಿವ ಸತೀಶ್‌ ಜಾರಕಿಹೊಳಿ: ಸಚಿವ ಸತೀಶ್‌ ಜಾರಕಿಹೊಳಿ

Spread the loveಹುಕ್ಕೇರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲೆಂಬ ಉದ್ದೇಶದಿಂದ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ 9 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ