Breaking News

ಯೆಸ್ ಬ್ಯಾಂಕ್ ಮೇಲೆ ನಿಷೇಧ : ಫೋನ್ ಪೇ ಗ್ರಾಹಕರಿಗೆ ಕ್ಷಮೇ ಕೇಳಿದ ಸಿಇಒ

Spread the love

ನವದೆಹಲಿ : ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಯೆಸ್ ಬ್ಯಾಂಕ್ ಮೇಲೆ ರಿಸರ್ವ್ ಬ್ಯಾಂಕ್ ನಿಷೇಧ ಹೇರಿದ್ದು, ಅದರ ನೇರ ಪರಿಣಾಮ ಫೋನ್ ಪೇ ಮೇಲೆ ಉಂಟಾಗಿ ಜನರು ಪರದಾಡುವಂತಾಗಿದೆ. .

ಹಣ ವರ್ಗಾವಣಾ ಮೊಬೈಲ್ ಆಪ್ ಫೋನ್ ಪೇ ಯೆಸ್ ಬ್ಯಾಂಕ್ ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿತ್ತು. ಆದರೆ ಇದೀಗ ಯೆಸ್ ಬ್ಯಾಂಕ್ ಮೇಲಿನ ನಿಷೇಧದಿಂದ ಫೋನ್ ಪೇ ಸೇವೆಗಳು ಸಿಗುತ್ತಿಲ್ಲ. ಈ ಕುರಿತು ಫೋನ್ ಪೇ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹೇಳಿಕೊಂಡು ಜನರಲ್ಲಿ ಕ್ಷಮೆ ಯಾಚಿಸಿದೆ.

ಪ್ರೀತಿಯ ಗ್ರಾಹಕರೇ, ದೀರ್ಘಕಾಲದ ಅಡಚಣೆಗಾಗಿ ನಾವು ವಿಷಾದಿಸುತ್ತೇವೆ. ನಮ್ಮ ಪಾಲುದಾರ ಬ್ಯಾಂಕ್ ಯೆಸ್ ಬ್ಯಾಂಕ್ ನ್ನು ಆರ್ ಬಿಐ ನಿಷೇಧಿಸಿದೆ. ಸೇವೆಗೆ ಮರಳುವಂತಾಗಲು ನಮ್ಮ ತಂಡ ಶ್ರಮಿಸುತ್ತಿದೆ. ಕೆಲವೇ ಗಂಟೆಗಳಲ್ಲಿ ಮತ್ತೆ ಮರಳಿ ಬರುತ್ತೇವೆ ಎಂದು ನಂಬಿದ್ದೇವೆ. ನಿಮ್ಮ ತಾಳ್ಮೆಗೆ ಧನ್ಯವಾದಗಳು ಎಂದು ಫೋನ್ ಪೇ ಸಿಇಓ ಸಮೀರ್ ನಿಗಮ್ ಟ್ವೀಟ್ ಮಾಡಿದ್ದಾರೆ.


Spread the love

About Laxminews 24x7

Check Also

ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಿಗೆ ನಾಳೆಯಿಂದಲೇ ಕಬ್ಬು ನುರಿಸಲು ಅನುಮತಿ ನೀಡಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್​ ಹೇಳಿದ್ದಾರೆ.

Spread the loveಬೆಂಗಳೂರು : ದಾವಣಗೆರೆ ಸೇರಿದಂತೆ ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಿಗೆ ಅ. 20 ರಿಂದಲೇ ಕಬ್ಬು ಕ್ರಷಿಂಗ್‌ ಆರಂಭಿಸಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ