Breaking News

ವರ್ಷವಾದರೂ ದೊರಕದ ಪರಿಹಾರ: ಹೋರಾಟದ ಎಚ್ಚರಿಕೆ ನೀಡಿದ ಬೆಳಗಾವಿಯ ಪ್ರವಾಹ ಸಂತ್ರಸ್ತರು

Spread the love

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಬಂದು ವರ್ಷ ಕಳೆದರೂ ಸರಕಾರದಿಂದ 9 ಸಾವಿರಕ್ಕೂ ಹೆಚ್ಚಿನ ಸಂತ್ರಸ್ತ ಕುಟುಂಬಗಳಿಗೆ ಇಲ್ಲಿಯವರೆಗೂ ಯಾವುದೇ ಪರಿಹಾರ ದೊರಕಿಲ್ಲ ಎಂದು ತಿಳಿದುಬಂದಿದೆ.

ಕಳೆದ ವರ್ಷ ಜುಲೈ ತಿಂಗಳಲ್ಲಿ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಪ್ರವಾಹ ಬಂದು ಅಪಾರ ಹಾನಿ ಸಂಭವಿಸಿತ್ತು. ಆ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ತಾಂತ್ರಿಕ ಸಮಸ್ಯೆ ಕಾರಣ ನೀಡಿ ಪರಿಹಾರ ಮಂಜೂರು ಮಾಡಲು ಸಾಧ್ಯವಾಗಿಲ್ಲ ಎಂದು ಜಿಲ್ಲಾಡಳಿತದ ಅಧಿಕೃತ ಅಂಕಿ-ಅಂಶಗಳು ಹೇಳುತ್ತಿವೆ.

ಮನೆ ಕಳೆದುಕೊಂಡ ಸಂತ್ರಸ್ತರೆಲ್ಲರೂ ಬಿದ್ದ ಜಾಗದಲ್ಲೇ ಶೆಡ್‍ನಲ್ಲೋ ಅಥವಾ ಬಂಧುಗಳ ಮನೆಯಲ್ಲೋ ವಾಸ ಮಾಡುತ್ತಿದ್ದಾರೆ. ಸಂಪೂರ್ಣವಾಗಿ ಸೂರು ಕಳೆದುಕೊಂಡಿರುವವರಿಗೂ ನೆರವು ದೊರೆತಿಲ್ಲ. ಮತ್ತೊಂದು ಮುಂಗಾರು ಮಳೆ ಆರಂಭವಾಗಿರುವುದರಿಂದ ಅವರು ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ ಎಂದು .
ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿರುವ ರಾಮದುರ್ಗದ ಮಲಪ್ರಭಾ ನದಿ ಪ್ರವಾಹ ಸಂತ್ರಸ್ತರು, ಪರಿಹಾರ ನೀಡದಿದ್ದರೆ, ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ತಾಂತ್ರಿಕ ಸಮಸ್ಯೆಯಿಂದಾಗಿ ನೆರೆ ಸಂತ್ರಸ್ತರಿಗೆ ಪರಿಹಾರ ದೊರಕಿಲ್ಲ. ಅಧಿಕಾರಿಗಳು ಸದ್ಯದಲ್ಲಿಯೇ ವರದಿ ಸಲ್ಲಿಸಲಿದ್ದು, ಈ ಬಗ್ಗೆ ಸಿಎಂ ಜೊತೆ ಚರ್ಚಿಸಿ ಸಮಸ್ಯೆ ಪರಿಹರಿಸಲು ಯತ್ನಿಸುವೆ.

ಸಚಿವ ರಮೇಶ ಜಾರಕಿಹೊಳಿ


Spread the love

About Laxminews 24x7

Check Also

ಕಸದ ರಾಶಿಯಲ್ಲಿ ಮುಳುಗಿರುವ ಬೆಳಗಾವಿ ಅಜಮ್ ನಗರದ ಮೊದಲನೇ ಕ್ರಾಸ್…

Spread the love ಕಸದ ರಾಶಿಯಲ್ಲಿ ಮುಳುಗಿರುವ ಬೆಳಗಾವಿ ಅಜಮ್ ನಗರದ ಮೊದಲನೇ ಕ್ರಾಸ್… ಕಸ ವಿಲೇವಾರಿಯಾಗುತ್ತಿಲ್ಲ, ನಾಯಿಗಳ ಹಾವಳಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ