ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಹಾಗೂ ಕಾರ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ರಾಜ್ಯದಲ್ಲಿ ಇತಿಹಾಸ ಸೃಷ್ಟಿಸಲಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು.. ಪದಗ್ರಹಣ ಕಾರ್ಯಕ್ರಮವನ್ನು ಎಲ್ಇಡಿ ಸ್ಕ್ರೀನ್ ಮೂಲಕ ವೀಕ್ಷಣೆ ನಡೆಯಲಿದೆ. ಡಿಜಿಟಲ್ ಮೀಡಿಯಾದ ಮೂಲಕ ನಡೆಯುತ್ತಿರುವ ದೊಡ್ಡ ಕಾರ್ಯಕ್ರಮ ಇದಾಗಿದೆ. ಕಾರ್ಯಕ್ರಮದಲ್ಲಿ 10 ಲಕ್ಷ ಜನ ಎದ್ದು ನಿಂತು ರಾಷ್ಟ್ರಗೀತೆ ಗಾಯನ ಮಾಡಲ್ಲಿದ್ದಾರೆ. ಕೇಡರ್ ಮಟ್ಟದಿಂದ ಪಕ್ಷ ಬೆಳೆಸುವ ಉದ್ದೇಶ ಹೊಂದಲಾಗಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗುವ ಜನ ಮಿಸ್ ಕಾಲ್ ನೀಡಿ ಸದಸ್ಯತ್ವ ಪಡೆಯಲ್ಲಿದ್ದಾರೆ. ರಾಜ್ಯದ ಜನರ ಆಶೀರ್ವಾದ ನಮ್ಮ ಪಕ್ಷದ ಮೇಲೆ ಇರಲಿ ಎಂದು ಮನವಿ ಮಾಡಿಕೊಂಡಿದ್ದಾರೆ.