ನಾಯಿ ಕಚ್ಚಿ ಗಾಯಗೊಂಡಿದ್ದ ಬಾಲಕ ಸಾವು ಬೆಳಗಾವಿ ಜಿಲ್ಲೆಯಲ್ಲಿ ನಡದ್ದಿದೆ

Spread the love

ಬೆಳಗಾವಿ :ಬೆಳಗಾವಿ ಸಮೀಪದ ಮಚ್ಛೆ ಗ್ರಾಮದಲ್ಲಿ ಎರಡು ತಿಂಗಳ ಹಿಂದೆ ನಾಯಿ ಕಡಿತದಿಂದ ಗಾಯಗೊಂಡು ಚಿಕಿತ್ಸೆ ಪಡೆದಿದ್ದ ಶಹಾಪುರ ಆನಂದವಾಡಿಯ 8 ವರ್ಷದ ಬಾಲಕ, ತೀವ್ರ ಅನಾರೋಗ್ಯದಿಂದ ಗುರುವಾರ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದಲ್ಲಿ ಎರಡು ತಿಂಗಳ ಹಿಂದೆ ನಾಯಿ ಕಡಿತದಿಂದ ಗಾಯಗೊಂಡಿದ್ದ ಶಹಾಪುರ ಆನಂದವಾಡಿಯ 8 ವರ್ಷದ ಬಾಲಕ ಸೋಹಂ ಸುನೀಲ ಬೆನಕೆ ಗುರುವಾರ ಜಿಲ್ಲಾಸ್ಪತ್ರೆಯಲ್ಲಿ ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. 2 ತಿಂಗಳ ಹಿಂದೆ ನಾಯಿ ಕಡಿತದಿಂದ ಗಾಯಗೊಂಡಿದ್ದ ಬಾಲಕನಿಗೆ ಅಂದಿನಿಂದಲೇ ಚಿಕಿತ್ಸೆ ಮುಂದುವರಿದಿತ್ತು.
ಆದರೆ ಆತ ಚೇತರಿಸಿಕೊಂಡಿರಲಿಲ್ಲ. ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಬುಧವಾರ ಬಾಲಕನನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಬಾಲಕ ಬಿಮ್ಸ್‍ನಲ್ಲಿ ಗುರುವಾರ ಮೃತಪಟ್ಟಿದ್ದಾನೆ.
ಕೊರೋನಾ ಸೋಂಕು ವ್ಯಾಪಿಸುತ್ತಿದೆ. ಇಂಥದರ ನಡುವೆ ನಾಯಿ ಕಡಿತದಿಂದ ಗಾಯಗೊಂಡ ಬಾಲಕ ಸಿವಿಲ್ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದು ಆತಂಕ ಮೂಡಿಸಿದೆ.


Spread the love

About Laxminews 24x7

Check Also

ಯಲ್ಲಮ್ಮನಗುಡ್ಡದಲ್ಲಿ ಸಂಚಾರ ಕಿರಿಕಿರಿ

Spread the loveಸವದತ್ತಿ: ಸಮೀಪದ ಯಲ್ಲಮ್ಮನಗುಡ್ಡದ ಶ್ರೀ ರೇಣುಕಾ ಯಲ್ಲಮ್ಮದೇವಿ ಜಾತ್ರೆ ಅಂಗವಾಗಿ ಅಪಾರ ಭಕ್ತ ಸಮೂಹ ಆಗಮಿಸಿದ್ದರಿಂದ ಮಂಗಳವಾರ ಎಲ್ಲೆಡೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ