Breaking News
Home / ಜಿಲ್ಲೆ / ನಾಯಿ ಕಚ್ಚಿ ಗಾಯಗೊಂಡಿದ್ದ ಬಾಲಕ ಸಾವು ಬೆಳಗಾವಿ ಜಿಲ್ಲೆಯಲ್ಲಿ ನಡದ್ದಿದೆ

ನಾಯಿ ಕಚ್ಚಿ ಗಾಯಗೊಂಡಿದ್ದ ಬಾಲಕ ಸಾವು ಬೆಳಗಾವಿ ಜಿಲ್ಲೆಯಲ್ಲಿ ನಡದ್ದಿದೆ

Spread the love

ಬೆಳಗಾವಿ :ಬೆಳಗಾವಿ ಸಮೀಪದ ಮಚ್ಛೆ ಗ್ರಾಮದಲ್ಲಿ ಎರಡು ತಿಂಗಳ ಹಿಂದೆ ನಾಯಿ ಕಡಿತದಿಂದ ಗಾಯಗೊಂಡು ಚಿಕಿತ್ಸೆ ಪಡೆದಿದ್ದ ಶಹಾಪುರ ಆನಂದವಾಡಿಯ 8 ವರ್ಷದ ಬಾಲಕ, ತೀವ್ರ ಅನಾರೋಗ್ಯದಿಂದ ಗುರುವಾರ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದಲ್ಲಿ ಎರಡು ತಿಂಗಳ ಹಿಂದೆ ನಾಯಿ ಕಡಿತದಿಂದ ಗಾಯಗೊಂಡಿದ್ದ ಶಹಾಪುರ ಆನಂದವಾಡಿಯ 8 ವರ್ಷದ ಬಾಲಕ ಸೋಹಂ ಸುನೀಲ ಬೆನಕೆ ಗುರುವಾರ ಜಿಲ್ಲಾಸ್ಪತ್ರೆಯಲ್ಲಿ ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. 2 ತಿಂಗಳ ಹಿಂದೆ ನಾಯಿ ಕಡಿತದಿಂದ ಗಾಯಗೊಂಡಿದ್ದ ಬಾಲಕನಿಗೆ ಅಂದಿನಿಂದಲೇ ಚಿಕಿತ್ಸೆ ಮುಂದುವರಿದಿತ್ತು.
ಆದರೆ ಆತ ಚೇತರಿಸಿಕೊಂಡಿರಲಿಲ್ಲ. ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಬುಧವಾರ ಬಾಲಕನನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಬಾಲಕ ಬಿಮ್ಸ್‍ನಲ್ಲಿ ಗುರುವಾರ ಮೃತಪಟ್ಟಿದ್ದಾನೆ.
ಕೊರೋನಾ ಸೋಂಕು ವ್ಯಾಪಿಸುತ್ತಿದೆ. ಇಂಥದರ ನಡುವೆ ನಾಯಿ ಕಡಿತದಿಂದ ಗಾಯಗೊಂಡ ಬಾಲಕ ಸಿವಿಲ್ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದು ಆತಂಕ ಮೂಡಿಸಿದೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ