ಬೆಳಗಾವಿ : ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಸಚಿವ ರಮೇಶ ಜಾರಕಿಹೊಳಿ ಜಂಟಿ ಸುದ್ದಿಗೋಷ್ಠಿ.
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ಕಳೆದ ಒಂದು ವಾರದಿಂದ ಬ್ಯಾಂಕ್ ಚುನಾವಣೆ ಅವಿರೋಧ ಆಯ್ಕೆ ಮಾಡಲು ಕಸರತ್ತು ನಡೆಸಿದ್ದೇವು. ವೈಮನಸ್ಸು ತಪ್ಪಿಸಲು ಅವಿರೋಧ ಆಯ್ಕೆ ಒತ್ತು ಕೊಟ್ಟಿದ್ದೇವು. ಪಕ್ಷದ ಮುಖಂಡರು ಇದೇ ಸೂಚನೆಯನ್ನು ನೀಡಿದ್ದರು. ಜಾರಕಿಹೊಳಿ, ಸವದಿ ಹಾಗೂ ಕತ್ತಿ ಕುಟುಂಬ ಒಟ್ಟಿಗೆ ಬರಬೇಕು ನಿರ್ಧಾರ
ಜಿಲ್ಲೆಯ ಹೊಸ ರಾಜಕೀಯ ಪರ್ವ ಆರಂಭಿಸಲು ತೀರ್ಮಾನ ಮಾಡಿದ್ದೇವೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯ ಎಂದು ಲಕ್ಷ್ಮಣ ಸವದಿ ಹೇಳಿದರು.