Breaking News

ಕೋವಿಡ್-೧೯: ಐವರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

Spread the love

ಬೆಳಗಾವಿ, ಮೇ 2 (ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಐವರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ನಾಲ್ವರು ಮಹಿಳೆಯರು ಪಿ- 282, ಪಿ-285, ಪಿ-286 ಮತ್ತು ಪಿ-288 ಹಾಗೂ ಒಬ್ಬ ಪುರುಷ ಪಿ-283 ಬಿಡುಗಡೆ ಹೊಂದಿರುತ್ತಾರೆ.

ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 73 ಜನರಲ್ಲಿ ಸೋಂಕು ಪತ್ತೆಯಾಗಿರುತ್ತದೆ. ಇದೀಗ ಒಟ್ಟಾರೆ 15 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಬ್ಬರು ಮೃತಪಟ್ಟಿರುತ್ತಾರೆ.


Spread the love

About Laxminews 24x7

Check Also

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

Spread the love ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ