ಬೆಂಗಳೂರು: ಆರ್.ಆರ್ ನಗರ ಉಪಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಈ ವೇಳೆ ಕೆಲವರು ಕೇಸರಿ ಮಾಸ್ಕ್ ಧಾರಣೆ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ.
ಕನ್ಯಾಕುಮಾರಿ ಶಾಲೆಯ ಮತಗಟ್ಟೆ ಬಳಿ ಪ್ಯಾರಾಮಿಲಿಟರಿ ಫೋರ್ಸ್ ಸಿಬ್ಬಂದಿ ಕೇಸರಿ ಬಣ್ಣದ ಮಾಸ್ಕ್ ಧರಿಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ರು. ಪಟ್ಟು ಹಿಡಿದು ಮಾಸ್ಕ್ ಬದಲಿಸುವಂತೆ ಮಾಡಿದ್ರು. ಇದರ ಬೆನ್ನಲ್ಲೇ ಮತಗಟ್ಟೆ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರು ಧರಿಸಿದ್ದ ಕೇಸರಿ ಮಾಸ್ಕ್ಗಳನ್ನ ಕೂಡ ಪೊಲೀಸರು ತೆಗೆಸಿದ್ದಾರೆ.