ಬೆಂಗಳೂರು: ಗ್ರಾಮೀಣಾಭಿವೃದ್ದಿ ಸಚಿವ ಕೆ ಎಸ್ ಈಶ್ವರಪ್ಪ ಅವರ ನಿವಾಸದಲ್ಲಿ ಇಂದು ಕುರುಬ ಸಮಾಜ ನಾಯಕರ ಸಭೆ ನಡೆಯಿತು.
ಎಸ್ ಟಿ ಹೋರಾಟ ಕುರಿತು ರೂಪರೇಷೆ ಸಿದ್ದಪಡಿಸುವ ಸಲುವಾಗು ಪೂರ್ವಭಾವಿ ಸಭೆ ಇಂದು ನಡೆಯಿತು. ಸಮಾಜದ ನಾಲ್ಕು ಮಠಾಧೀಶರು ಭಾಗಿಯಾಗಿದ್ದರು.
ಸಭೆಯಲ್ಲಿ ಸಚಿವ ಈಶ್ವರಪ್ಪ, ಹೆಚ್ ವಿಶ್ವನಾಥ್, ರಘುನಾಥ್ ಮಲ್ಕಾಪುರೆ, ಮಾಜಿ ಮೇಯರ್ ವೆಂಕಟೇಶ್ ಮೂರ್ತಿ, ಮಾಜಿ ಮೇಯರ್ ರಾಮಚಂದ್ರಪ್ಪ ಮುಕುಟಪ್ಪ ಸೇರಿದಂತೆ 100 ಕ್ಕೂ ಹೆಚ್ಚು ನಾಯಕರು ಭಾಗಿಯಾದರು.