Breaking News

ಕರ್ನಾಟಕದ ನಾಲ್ವರು ಅಭ್ಯರ್ಥಿಗಳೂ ಅವಿರೋಧ ಆಯ್ಕೆ

Spread the love

ರಾಜ್ಯಸಭೆ ಚುಣಾವಣೆ ಫಲಿತಾಂಶ ಹೊರಬಿದ್ದಿದ್ದು, ಕರ್ನಾಟಕದ ನಾಲ್ವರು ಅಭ್ಯರ್ಥಿಗಳಾದ ಬಿಜೆಪಿ ಅಭ್ಯರ್ಥಿಗಳಾದ ಈರಣ್ಣ ಕಡಾಡಿ ಮತ್ತು ಅಶೋಕ ಗಸ್ತಿ ಹಾಗೂ ಕಾಂಗ್ರೆಸ್‌ನಿಂದ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್‌ನಿಂದ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಈ ಕುರಿತು ಮಾಹಿತಿ ನೀಡಿದ್ದು, ರಾಜ್ಯಸಭಾ ಚುನಾವಣೆ-2020ರಲ್ಲಿ ಕರ್ನಾಟಕದಲ್ಲಿ ನಾಲ್ಕೂ ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಅವಿರೋಧವಾಗಿ ಆಯ್ಕೆಯಾದ ಅಧಿಕೃತ ಘೋಷಣಾ ಪತ್ರವನ್ನು ಕಾಂಗ್ರೆಸ್‍ನ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಅಭ್ಯರ್ಥಿಗಳಾದ ಅಶೋಕ್ ಗಸ್ತಿ, ಈರಣ್ಣ ಕಡಾಡಿ ಅವರು ಪಡೆದುಕೊಂಡಿದ್ದಾರೆ.


Spread the love

About Laxminews 24x7

Check Also

ಪಂಚಮಸಾಲಿ ಪೀಠದಲ್ಲಿ ಸಭೆ, ಸಮಾರಂಭ ಮಾಡದಂತೆ ಒಂದು ತಿಂಗಳ ಕಾಲ ನಿಷೇಧಾಜ್ಞೆ ಜಾರಿ

Spread the loveದಾವಣಗೆರೆ: ಹರಿಹರ ಪಂಚಮಸಾಲಿ ಪೀಠದಲ್ಲಿ  ದಿನ ಕಳೆದಂತೆ ಸ್ವಾಮೀಜಿ  ಬೆಂಬಲಿಗರು ಹಾಗೂ ಟ್ರಸ್ಟಿಗಳ ನಡುವಿನ ಗಲಾಟೆ ಜೋರಾಗುತ್ತಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ