Breaking News

50 ಜನರಿಗಿಂತ ಹೆಚ್ಚು ಜನರು ಮದುವೆಗೆ ಸೇರುವಂತಿಲ್ಲ

Spread the love

ಬೆಂಗಳೂರು : ಇದುವರೆಗೆ ಕೊರೋನಾ ಸೋಂಕಿನ ಭೀತಿಯ ನಡುವೆಯೂ ಮದುವೆಗೆ ಅವಕಾಶ ನೀಡಲಾಗಿತ್ತು. 50 ಜನರಿಗೆ ಮಾತ್ರವೇ ಸೀಮಿತಗೊಳಿಸಲಾಗಿತ್ತು. ಆದ್ರೇ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಕಾರಣ, 50 ಜನರಿಗಿಂತ ಹೆಚ್ಚು ಜನರು ಮದುವೆಗೆ ಸೇರುವಂತಿಲ್ಲ. ಒಂದು ವೇಳೆ ಅದಕ್ಕಿಂತಲೂ ಹೆಚ್ಚಿನ ಜನರು ಸೇರಿದ್ದೇ ಆದಲ್ಲಿ, ಮದುವೆ ನಡೆಸುತ್ತಿರುವವರಿಗೆ ದಂಡ ವಿಧಿಸಲಾಗುತ್ತದೆ ಎಂಬುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸೋದರ ಬಗ್ಗೆ ಮತ್ತಷ್ಟು ಕಠಿಣ ನಿಯಮ ಜಾರಿಗೊಳಿಸಲಾಗುತ್ತಿದೆ. ಮಾಸ್ಕ್ ಧರಿಸದೇ ನಗರ ಪ್ರದೇಶಗಳಲ್ಲಿ ಓಡಾಡುವ ಜನರಿಗೆ ರೂ.1000 ದಂಡ ವಿಧಿಸಲಾಗುತ್ತದೆ.ಗ್ರಾಮೀಣ ಪ್ರದೇಶದಲ್ಲಿ ರೂ.500 ದಂಡವನ್ನು ವಿಧಿಸಲಾಗುತ್ತದೆ ಎಂಬುದಾಗಿ ತಿಳಿಸಿದರು.

ಇನ್ನೂ ಮುಂದುವರೆದು ಮಾತನಾಡಿದ ಅವರು, ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮವಾಗಿ 50 ಜನರಿಗಷ್ಟೇ ಮದುವೆಯಲ್ಲಿ ಭಾಗವಹಿಸಿ, ಮದುವೆ ಕಾರ್ಯ ನಡೆಸಲು ಅನುಮತಿಸಲಾಗಿದೆ. ಆದ್ರೇ ಅನೇಕ ಕಡೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿರುವುದು ಕಂಡು ಬರುತ್ತಿದೆ. ಇದರಿಂದ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ 50 ಜನರಿಗಿಂತ ಹೆಚ್ಚು ಜನರು ಸೇರಿದ್ರೇ.. ಅಂತಹ ಮದುವೆ ಕಾರ್ಯಕ್ರಮ ನಡೆಸುವವರಿಗೆ ದಂಡ ವಿಧಿಸಲಾಗುತ್ತದೆ ಎಂಬುದಾಗಿ ಖಡಕ್ ಎಚ್ಚರಿಕೆ ನೀಡಿದರು.


Spread the love

About Laxminews 24x7

Check Also

ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ, ಯಾರಿಗೆ ಎಷ್ಟು ಹಣ ಸಿಗುತ್ತೆ?

Spread the loveಬೆಂಗಳೂರು, (ಜೂನ್ 18): 2025-26ನೇ ಸಾಲಿನಲ್ಲಿ ಕರ್ನಾಟಕದ (Karnataka)ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ನಿಗದಿತ ಸಮಯಕ್ಕಿಂತ ಮೊದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ