Breaking News

ಡಿ.ಕೆ. ಶಿವಕುಮಾರ್‌ ಅವರ ಭಾವೀ ಅಳಿಯ ಅಭ್ಯರ್ಥಿ

Spread the love

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ “ಅಚ್ಚರಿಯ ಅಭ್ಯರ್ಥಿ’ಯಾಗಿ ಬಿಜೆಪಿ ನಾಯಕ, ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಮೊಮ್ಮಗ, ಕಾಫಿ ಡೇ ಸಿದ್ಧಾರ್ಥ ಅವರ ಪುತ್ರ ಮತ್ತು ಡಿ.ಕೆ. ಶಿವಕುಮಾರ್‌ ಅವರ ಭಾವೀ ಅಳಿಯ ಅಮರ್ತ್ಯ ಕಣಕ್ಕಿಳಿಯುವ ಸಾಧ್ಯತೆಗಳಿವೆ.

ಉಪಚುನಾವಣೆಯಲ್ಲಿ ಈ ಕ್ಷೇತ್ರವನ್ನು ಹೇಗಾದರೂ ಕಾಂಗ್ರೆಸ್‌ ಬುಟ್ಟಿಗೆ ಹಾಕಿಕೊಳ್ಳಬೇಕು ಎಂಬುದು ಡಿ.ಕೆ. ಸಹೋದರರ ತಂತ್ರಗಾರಿಕೆ. ಹೀಗಾಗಿ ಅಚ್ಚರಿಯೆಂಬಂತೆ ಅಮರ್ತ್ಯ ಸುಬ್ರಮಣ್ಯ ಹೆಗ್ಡೆ ಅವರನ್ನು ಅಚ್ಚರಿ ಆಯ್ಕೆಯಾಗಿ ಕಣಕ್ಕಿಳಿಸಲು ತಯಾರಿ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಆದರೆ ಸ್ವತಃ ಅಮರ್ತ್ಯ ಮತ್ತು ಅವರ ಕುಟುಂಬದವರು ಈ ಕುರಿತು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಮನವೊಲಿಕೆ ಯಶಸ್ವಿಯಾದರೆ ಅವರೇ ಆರ್‌.ಆರ್‌.ನಗರಕ್ಕೆ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ