Breaking News

25 ವರ್ಷ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಆಡಳಿತ

Spread the love

ಬೆಂಗಳೂರು: ಹಾಸನ-ಮಂಡ್ಯ ಎರಡು ಕಣ್ಣುಗಳಿದ್ದಂತೆ ಎಂದು ಹೇಳುತ್ತಿದ್ದವರಿಂದ ಆ ಭಾಗ ಅಭಿವೃದ್ಧಿಯಾಗಲಿಲ್ಲ. ಮಂಡ್ಯ ಹಾಗೂ ಹಾಸನಗಳ ಅಭಿವೃದ್ಧಿಗೆ ಯಡಿಯೂರಪ್ಪ ಅವರೇ ಬರಬೇಕಾಯ್ತು. ಅವರು ಸಿಎಂ ಆದ್ಮೇಲೆ ಎರಡೂ ಜಿಲ್ಲೆಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದರು ಎಂದು ತೋಟಗಾರಿಕಾ ಸಚಿವ ಡಾ. ನಾರಾಯಣಗೌಡ ಅವರು ಪರೋಕ್ಷವಾಗಿ ಜೆಡಿಎಸ್ ನಾಯಕರ ಮೇಲೆ ವಾಗ್ದಾಳಿ ಮಾಡಿದರು.

ಆರ್‌.ಆರ್. ನಗರದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರೊಂದಿಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಪರವಾಗಿ ಪ್ರಚಾರ ಮಾಡಿದರು. ಪ್ರಚಾರ ಭಾಷಣದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರಂತೆ ಸಿಎಂ ಯಡಿಯೂರಪ್ಪ ಕೂಡ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಮಂಡ್ಯದ ಅಭಿವೃದ್ಧಿಗೆ ಯಡಿಯೂರಪ್ಪ ಅವರೇ ಬರಬೇಕಾಯ್ತು. ಹಾಸನ-ಮಂಡ್ಯ ಎರಡು ಕಣ್ಣುಗಳಿದ್ದಂತೆ ಎಂದು ಹಿಂದೆ ಕೇವಲ ಬಾಯಿಮಾತಿಗೆ ಹೇಳ್ಕೊಂಡು ಬಂದರು.

ಆದರೆ ಅನುದಾನ ಮಾತ್ರ ಏನೂ ಕೊಡಲಿಲ್ಲ.

ಯಡಿಯೂರಪ್ಪ ಅವರು ಸಿಎಂ ಆದ್ಮೇಲೆ ಸಾವಿರಾರು ಕೋಟಿ ರೂ. ಅನುದಾನ ಕೊಟ್ಟಿದ್ದಾರೆ. ಅದೇ ರೀತಿ ಆರ್ ಆರ್ ನಗರದ ಅಭಿವೃದ್ಧಿಗೆ ಮುನಿರತ್ನ ಅವರನ್ನ ಹೆಚ್ಚಿನ ಮತದಿಂದ ಗೆಲ್ಲಿಸಿ. ಕೆಲವೇ ದಿನಗಳಲ್ಲಿ ಮುನಿರತ್ನ ಸಚಿವರಾಗಿ ಈ ಭಾಗಕ್ಕೆ ಬರುತ್ತಾರೆ ಎಂದು ಸಚಿವ ಡಾ. ನಾರಾಯಣ ಗೌಡ ಹೇಳಿದರು.ಲಗ್ಗೆರೆ ಭಾಗದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದಲ್ಲಿ ಮಾತನಾಡಿದರು. ಅಧಿಕಾರದಲ್ಲಿ ಇಲ್ಲದಿದ್ದರೂ ಮುನಿರತ್ನ ಸೇವೆ ಮಾಡುತ್ತಲೇ ಇದ್ದಾರೆ. ಲಾಕ್‌ಡೌನ್ ಸಂದರ್ಭದಲ್ಲಿ ಪ್ರತಿಯೊಬ್ಬರ ಸಂಕಷ್ಟಕ್ಕೂ ನೆರವಾಗಿದ್ದಾರೆ. ಸದಾ ಜನರ ಸಮಸ್ಯೆಗೆ ಸ್ಪಂದಿಸುವ ಮುನಿರತ್ನ ಅವರನ್ನ ಗೆಲ್ಲಿಸಿ ಎಂದು ಜನರಲ್ಲಿ ಮನವಿ ಮಾಡಿದರು. 25 ವರ್ಷ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಆಡಳಿತದಲ್ಲಿ ಇರುತ್ತದೆ. ಹೀಗಾಗಿ ಅಭಿವೃದ್ಧಿಗೋಸ್ಕರ ಜನರು ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಮತ ನೀಡಿ ಎಂದು ಸಚಿವರು ಮನವಿ ಮಾಡಿದ್ರು. ಸಚಿವರಾದ ಆರ್ ಅಶೋಕ್, ಗೋಪಾಲಯ್ಯ, ಅಭ್ಯರ್ಥಿ ಮುನಿರತ್ನ, ಬಿಜೆಪಿ ಮುಖಂಡೆ ಶೃತಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಲಿಂಗಾಯಿತ ಧರ್ಮದಲ್ಲಿರುವ ಜಂಗಮರು ಬೇಡ, ಬುಡ್ಗ ಜಂಗಮರಲ್ಲ: ಹೈಕೋರ್ಟ್​ ಸ್ಪಷ್ಟನೆ

Spread the love ಬೆಂಗಳೂರು: ವೀರಶೈವ ಲಿಂಗಾಯಿತ ಧರ್ಮದಲ್ಲಿರುವ ಜಂಗಮರು ‘ಬೇಡ’ ಅಥವಾ ‘ಬುಡ್ಗ’ ಜಂಗಮರಲ್ಲ. ಲಿಂಗಾಯಿತರಲ್ಲಿನ ಜಂಗಮರು ತಾವು ಬೇಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ