ಬೆಂಗಳೂರು: ಆರ್.ಆರ್ ನಗರ ಉಪಚುನಾವಣೆ ಕಣ ರಂಗೇರುತ್ತಿದ್ದು, ಮೂರು ಪಕ್ಷಗಳು ಜಿದ್ದಾಜಿದ್ದಿ ಪ್ರಚಾರ ನಡೆಸುತ್ತಿದ್ದಾರೆ. ನಿನ್ನೆ ಬಿಜೆಪಿ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಿದ್ದರು. ಈ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮ ಪ್ರತಿಕ್ರಿಯಿಸಿದ್ದು, ನಾನೂ ಕೂಡ ದರ್ಶನ್ರ ದೊಡ್ಡ ಅಭಿಮಾನಿ ಎಂದಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರಚಾರ ಮಾಡಲು ಅವಕಾಶ ಇದೆ. ಅದೇ ರೀತಿ ದರ್ಶನ್ ಅವರೂ ಪ್ರಚಾರ ಮಾಡಿದ್ದಾರೆ. ಈ ಹಿಂದೆ ಕೂಡ ದರ್ಶನ್ ಅವರು ಬಹಳಷ್ಟು ಕಡೆ ಪ್ರಚಾರ ಮಾಡಿದ್ದರು, ಅದೇ ರೀತಿ ಅವರು ಈ ಬಾರಿಯೂ ಪ್ರಚಾರ ಮಾಡಿದ್ದಾರೆ ಎಂದಿದ್ದಾರೆ.