Home / ಜಿಲ್ಲೆ / ವಿಜಯಪುರ: ಕಡಿಮೆ ಬೆಲೆಗೆ ಚಿನ್ನ ಕೊಡುವುದಾಗಿ 9 ಲಕ್ಷ ದೋಚಿದ ಖದೀಮರು

ವಿಜಯಪುರ: ಕಡಿಮೆ ಬೆಲೆಗೆ ಚಿನ್ನ ಕೊಡುವುದಾಗಿ 9 ಲಕ್ಷ ದೋಚಿದ ಖದೀಮರು

Spread the love

ಆಲಮೇಲ: ಕಡಿಮೆ ಬೆಲೆಯಲ್ಲಿ ಬಂಗಾರ ಕೊಡುವುದಾಗಿ ನಂಬಿಸಿದ ಖದೀಮರು ಸುಮಾರು 9 ಲಕ್ಷ ದೋಚಿದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕುರಬತ್ತಳ್ಳಿ, ಗುಂದಗಿ ರಸ್ತೆಯ ಪಕ್ಕದಲ್ಲಿ ಶುಕ್ರವಾರ ಸಂಭವಿಸಿದೆ.

ಮಹಾರಾಷ್ಟ್ರ ಮೂಲದ ಸುನೀಲ ಪ್ರಹ್ಲಾದ ಜಾಧವ ಮೋಸ ಹೋದ ವ್ಯಕ್ತಿ. ಕಡಿಮೆ ಬೆಲೆಯಲ್ಲಿ ಬಂಗಾರ ಕೊಡುವುದಾಗಿ ಕುರಬತ್ತಳ್ಳಿಗೆ ಸುನೀಲ ಹಾಗೂ ಆತನ ಪತ್ನಿಯನ್ನು ಕರೆಯಿಸಿಕೊಂಡಿದ್ದರು.

ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯ ವರ್ತನೆ: ಗುಮಾಸ್ತನಿಗೆ ಬಿತ್ತು ಗೂಸಾ

ಈ ಖದೀಮರ ಮಾತನ್ನು ನಂಬಿ ಬಂದ ದಂಪತಿ ಬಳಿಯಿದ್ದ 9 ಲಕ್ಷ ದೋಚಿದ್ದಲ್ಲದೆ, ಇವರ ಮೇಲೆ ಹಲ್ಲೆ ಮಾಡಿ ಸುನೀಲನ ಪತ್ನಿ ಹತ್ತಿರವಿದ್ದ ಬಂಗಾರದ ಒಡವೆಗಳನ್ನು ಸಹಿತ ದೋಚಿಕೊಂಡು ಪರಾರಿಯಾಗಿದ್ದಾರೆ. ಈ ಕುರಿತು ಆಲಮೇಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸರಿಯಾಗಿ ಮನೆ ಕೆಲಸ ಮಾಡುತ್ತಿಲ್ಲ, ಮಕ್ಕಳನ್ನು ನೋಡಿಕೊಳ್ಳುತ್ತಿಲ್ಲ ಎಂದು ಕೋಪಗೊಂಡ ಪತಿ ತನ್ನ ಪತ್ನಿ ಮತ್ತು ಆಕೆಯ ತಾಯಿಯನ್ನು ಕೊಲೆಗೈದ

Spread the love ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿ‌ ಹಾಗೂ ಆಕೆಯ ತಾಯಿಯನ್ನು ಕೊಲೆ‌ ಮಾಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ