Breaking News
Home / ಜಿಲ್ಲೆ / ಚಾಮರಾಜ ನಗರ / ಆಲದ ಮರವೊಂದು ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿಬಿದ್ದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ

ಆಲದ ಮರವೊಂದು ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿಬಿದ್ದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ

Spread the love

ಚಾಮರಾಜನಗರ: ರಸ್ತೆ ಬದಿಯಲ್ಲಿದ್ದ ಬೃಹತ್ ಆಲದ ಮರವೊಂದು ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿಬಿದ್ದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಹನೂರು ಪಟ್ಟಣದ ಹೊರ ವಲಯದ ಮಲೆಮಹದೇಶ್ವರ ಕ್ರೀಡಾಂಗಣದ ಬಳಿ ಇಂದು ಬೆಳಿಗ್ಗೆ ನಡೆದಿದೆ.

ಗಾಯಗೊಂಡವರನ್ನು ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯ ಕೀರೆಪಾತಿ ಗ್ರಾಮದ ಜೋಸೆಫ್ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ಇಬ್ಬರೂ ಇಂದು ಬೆಳಗ್ಗೆ 6:30ರ ಸುಮಾರಿಗೆ ಮಾರ್ಟಳ್ಳಿಯಿಂದ ಹನೂರಿಗೆ ಬೈಕಿನಲ್ಲಿ ಹೊರಟಿದ್ದರು. ಬೈಕ್ ಅಜ್ಜೀಪುರ ರಸ್ತೆಯ ಕ್ರೀಡಾಂಗಣದ ಬಳಿಯ ರಾಮಯ್ಯನ ಕೆರೆ ಹತ್ತಿರ ತಲುಪಿದಾಗ ರಸ್ತೆ ಬದಿಯಲ್ಲಿದ್ದ ಹಳೆಯ ಆಲದ ಮರ ಇದ್ದಕ್ಕಿದ್ದಂತೆ ಉರುಳಿ ಇವರ ಮೇಲೆ ಬಿದ್ದಿದೆ. ಇದರಿಂದ ಜೋಸೆಫ್ ಗಂಭೀರ ಗಾಯಗೊಂಡಿದ್ದು, ಕುಮಾರ್ ಕಾಲಿಗೆ ಗಾಯಗಳಾಗಿವೆ.ಈ ವೇಳೆ ಅದೆ ರಸ್ತೆಯಲ್ಲಿ ವಾಯು ವಿಹಾರಕ್ಕೆ ಹೋಗಿದ್ದ ಜೆಡಿಎಸ್ ಮುಖಂಡ ಮಂಜೇಶ್ ಮತ್ತು ಸತೀಶ್ ಎಂಬುವರು ಮರದಡಿಗೆ ಸಿಲುಕಿದ್ದ ಇಬ್ಬರನ್ನು ರಕ್ಷಿಸಿ ಹನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಸವಾರರಿಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ರಸ್ತೆಯಲ್ಲಿ ಇನ್ನೂ ಕೆಲ ಮರಗಳು ಬೀಳುವ ಸ್ಥಿತಿಯಲ್ಲಿದ್ದು, ಲೋಕೋಪಯೋಗಿ ಇಲಾಖೆ ಕೂಡಲೇ ಇವುಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ