Breaking News

ಬಾಗಿಲು ತೆರೆದು ಅಂಗಡಿ ಮುಂದೆ ಸಾಷ್ಟಾಂಗ ನಮಸ್ಕಾರ

Spread the love

ಚಾಮರಾಜನಗರ: ಬಂದ್ ಗೆ ಕರೆ ನೀಡಿದ್ದರೂ ಬಾಗಿಲು ತೆರೆದು ವ್ಯಾಪಾರ ನಡೆಸುತ್ತಿದ್ದ ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಅಂಗಡಿ ಮುಂದೆ ಕನ್ನಡ ಪರ ಹೋರಾಟಗಾರ ನಿಜಧ್ವನಿ ಗೋವಿಂದ ರಾಜು ಸಾಷ್ಟಾಂಗ ನಮಸ್ಕಾರ ಹಾಕಿ ಬಾಗಿಲು ಮುಚ್ಚಲು ಮನವಿ ಮಾಡಿದರು.

ಪ್ರತಿಭಟನಾಕಾರರ ಕೋರಿಕೆ ಮೇರೆಗೆ ಅಂಗಡಿ ಬಾಗಿಲು ಹಾಕಲಾಯಿತು. ನಗರದಲ್ಲಿ ಬೈಕ್‌ ರ್ಯಾಲಿ ನಡೆಸುತ್ತಿರುವ ರೈತರು ತೆರೆದಿದ್ದ ಅಂಗಡಿಗಳ ಮುಚ್ಚಿಸುತ್ತಿದ್ದಾರೆ‌. ನಗರದ ಸಂತೇಮರಳ್ಳಿ ವೃತ್ತದಲ್ಲಿರುವ ಪೆಟ್ರೋಲ್ ಬಂಕ್ ಅನ್ನು ಮುಚ್ಚಲು ಕೈ ಮುಗಿದು ಕೋರಲಾಯಿತು.

ಅಗತ್ಯ ಸೇವೆಯಲ್ಲಿ ಪೆಟ್ರೋಲ್ ಬಂಕ್ ಸಹ ಒಂದು. ಆದ್ದರಿಂದ ಬಲವಂತ ಮಾಡದಂತೆ ಪೊಲೀಸರು ತಿಳಿಸಿದರು. ಬಳಿಕ‌ ಪೆಟ್ರೋಲ್ ಬಂಕ್ ನಿಂದ ರೈತರು ತೆರಳಿದರು.


Spread the love

About Laxminews 24x7

Check Also

ಮಹಾ ಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪಾದಯಾತ್ರೆ – ಅರಣ್ಯ, ಪೊಲೀಸ್ ಇಲಾಖೆ ಕಣ್ಗಾವಲು

Spread the loveಚಾಮರಾಜನಗರ: ಮಹಾ ಶಿವರಾತ್ರಿ ಹಿನ್ನೆಲೆ ಏಳು ಮಲೆಯ ಒಡೆಯ ಮಲೆ ಮಾದಪ್ಪನ  ದರ್ಶನಕ್ಕೆ ಕಾಲ್ನಡಿಗೆಯಲ್ಲಿ ಲಕ್ಷಾಂತರ ಭಕ್ತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ