Breaking News

ಬಾಗಿಲು ತೆರೆದು ಅಂಗಡಿ ಮುಂದೆ ಸಾಷ್ಟಾಂಗ ನಮಸ್ಕಾರ

Spread the love

ಚಾಮರಾಜನಗರ: ಬಂದ್ ಗೆ ಕರೆ ನೀಡಿದ್ದರೂ ಬಾಗಿಲು ತೆರೆದು ವ್ಯಾಪಾರ ನಡೆಸುತ್ತಿದ್ದ ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಅಂಗಡಿ ಮುಂದೆ ಕನ್ನಡ ಪರ ಹೋರಾಟಗಾರ ನಿಜಧ್ವನಿ ಗೋವಿಂದ ರಾಜು ಸಾಷ್ಟಾಂಗ ನಮಸ್ಕಾರ ಹಾಕಿ ಬಾಗಿಲು ಮುಚ್ಚಲು ಮನವಿ ಮಾಡಿದರು.

ಪ್ರತಿಭಟನಾಕಾರರ ಕೋರಿಕೆ ಮೇರೆಗೆ ಅಂಗಡಿ ಬಾಗಿಲು ಹಾಕಲಾಯಿತು. ನಗರದಲ್ಲಿ ಬೈಕ್‌ ರ್ಯಾಲಿ ನಡೆಸುತ್ತಿರುವ ರೈತರು ತೆರೆದಿದ್ದ ಅಂಗಡಿಗಳ ಮುಚ್ಚಿಸುತ್ತಿದ್ದಾರೆ‌. ನಗರದ ಸಂತೇಮರಳ್ಳಿ ವೃತ್ತದಲ್ಲಿರುವ ಪೆಟ್ರೋಲ್ ಬಂಕ್ ಅನ್ನು ಮುಚ್ಚಲು ಕೈ ಮುಗಿದು ಕೋರಲಾಯಿತು.

ಅಗತ್ಯ ಸೇವೆಯಲ್ಲಿ ಪೆಟ್ರೋಲ್ ಬಂಕ್ ಸಹ ಒಂದು. ಆದ್ದರಿಂದ ಬಲವಂತ ಮಾಡದಂತೆ ಪೊಲೀಸರು ತಿಳಿಸಿದರು. ಬಳಿಕ‌ ಪೆಟ್ರೋಲ್ ಬಂಕ್ ನಿಂದ ರೈತರು ತೆರಳಿದರು.


Spread the love

About Laxminews 24x7

Check Also

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಮಗ್ರ ಸಿದ್ಧತೆ:D.C.

Spread the loveಬೆಳಗಾವಿ: ರಾಜ್ಯಾದ್ಯಂತ ಮಾರ್ಚ್ 21 ರಿಂದ ಏಪ್ರಿಲ್ 04 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಜಿಲ್ಲೆಯಲ್ಲಿ ಪರೀಕ್ಷೆಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ