Breaking News

ಮಲೆ ಮಹದೇಶ್ವರ ದೇವಾಲಯಕ್ಕೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಆದ್ರೆ ಸಚಿವ ಕೆ.ಎಸ್. ಈಶ್ವರಪ್ಪ ಅವರ ನಿಯಮ ಉಲ್ಲಂಘಿಸಿ ಇಂದು ಬೆಳಗ್ಗೆ ದೇವರ ದರ್ಶನ ಪಡೆದುಕೊಂಡಿದ್ದಾರೆ.

Spread the love

ಚಾಮರಾಜನಗರ: ಕರೊನಾ ಭೀತಿ ಹಿನ್ನೆಲೆಯಲ್ಲಿ ಜೂ.21ರವರೆಗೂ ಮಲೆ ಮಹದೇಶ್ವರ ದೇವಾಲಯಕ್ಕೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆದ್ರೆ ಸಚಿವ ಕೆ.ಎಸ್. ಈಶ್ವರಪ್ಪ ಅವರ ನಿಯಮ ಉಲ್ಲಂಘಿಸಿ ಇಂದು ಬೆಳಗ್ಗೆ ದೇವರ ದರ್ಶನ ಪಡೆದುಕೊಂಡಿದ್ದಾರೆ.

ಕೋವಿಡ್19 ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮಲೆ ಮಹದೇಶ್ವರ ದೇವಾಲಯಕ್ಕೆ ಜೂ.19ರಿಂದ 21ರವರೆಗೆ ಸಾರ್ವಜನಿಕರು ಹಾಗೂ ಭಕ್ತರಿಗೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಪ್ರವಾಸ ಕೈಗೊಂಡಿರುವ ಸಚಿವ ಕೆ.ಎಸ್. ಈಶ್ವರಪ್ಪ ಶುಕ್ರವಾರ ರಾತ್ರಿ ಮ.ಬೆಟ್ಟದಲ್ಲಿ ವಾಸ್ತವ್ಯ ಹೂಡಿದ್ದು, ಶನಿವಾರ ಮುಂಜಾನೆ ಸ್ಥಳೀಯ ಶಾಸಕರೊಂದಿಗೆ ಮಹದೇಶ್ವರ ಸ್ವಾಮಿ‌ ದರ್ಶನ ಪಡೆದಿದ್ದು, ಇದರಿಂದ ಅಸಮಾಧಾನಗೊಂಡ ಭಕ್ತರು ಜನರಿಗೊಂದು- ಜನಪ್ರತಿನಿಧಿಗಳಿಗೊಂದು‌ ಕಾನೂನು ಇದೆಯೇ ಎಂದು ಟೀಕಿಸಿದ್ದಾರೆ.

ಸಚಿವರ ಜತೆ ಹನೂರು ಶಾಸಕ ನರೇಂದ್ರ ಸೇರಿ ನಾಲ್ಕೈದು ಜನರು ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಸಚಿವರು ಮತ್ತು ಅವರ ಬೆಂಬಲಿಗರು ಮಾಸ್ಕ್ ಧರಿಸದೆ ನಿಯಮ ಉಲ್ಲಘಿಸಿದ್ದಾರೆ.

ಇನ್ನು ಈ ಹಿಂದೆಯೂ ಸಚಿವ ಕೆ.ಎಸ್. ಈಶ್ವರಪ್ಪ ನಿಯಮ ಉಲ್ಲಂಘಿ ರಾಘವೇಂದ್ರ ಸ್ವಾಮೀಜಿ ದರ್ಶನ ಪಡೆದುಕೊಂಡಿದ್ದರು.


Spread the love

About Laxminews 24x7

Check Also

ಗುಂಡಿನ ದಾಳಿಗೊಳಗಾದ ಕಾರು, ಉದ್ಯಮಿ ಪ್ರಪುಲ್ ಬಾಲಕೃಷ್ಣ ಪಾಟೀಲ

Spread the loveಬೆಳಗಾವಿ: ಕಾರಿನಲ್ಲಿ ಹೋಗುತ್ತಿದ್ದ ಉದ್ಯಮಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿರುವ ಘಟನೆ ಬೆಳಗಾವಿಯ ಗಣೇಶಪುರದ ಹಿಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ